ಒಂದು ಪೈಸೆಯೂ ಸಿಕ್ಕಿಲ್ಲ: ‘ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದುಗೂಡಿವೆ. ಬಿಜೆಪಿಯವರು ನನ್ನ ಮನೆಯಲ್ಲಿ ₹ 5 ಕೋಟಿ ಇದೆ ಎಂದು ಚುನಾವಣಾ ಅಧಿಕಾರಿಗೆ ದೂರು ನೀಡಿದ್ದರು. ಆದರೆ, ನನ್ನ ಮನೆಯಲ್ಲಿ ಅಧಿಕಾರಿಗಳಿಗೆ ಒಂದು ಪೈಸೆಯೂ ಸಿಕ್ಕಿಲ್ಲ. ನನ್ನ ರಕ್ಷಣೆಗೆ ನಿಯೋಜಿಸಲಾಗಿರುವ ಅರೆ ಸೇನಾ ಪಡೆಯ ಸಿಬ್ಬಂದಿ ಬಳಿ ಇದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮದ್ಯಕ್ಕೂ ನನಗೂ ಸಂಬಂಧ ಇಲ್ಲ’ ಎಂದು ಅಶೋಕ ಖೇಣಿ ತಿಳಿಸಿದರು.