‘ಮತದಾರರಿಗೆ ಹಂಚಲು ಅಥವಾ ತೆರಿಗೆ ವಂಚನೆ ಉದ್ದೇಶಕ್ಕಾಗಿ ಕದ್ದು ಮುಚ್ಚಿ ಹಣ ಸಾಗಿಸಲಾಗುತ್ತಿತ್ತೆ ಎಂಬುದು ಸ್ಪಷ್ಟವಾಗಿ ಗೊತ್ತಾಗಿಲ್ಲ. ತನಿಖೆಗೆ ಹಾಜರಾಗುವಂತೆ ಹಾರ್ಡ್ವೇರ್ ಮಾಲೀಕ ನಾಗರಾಜ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದು, ಆ ಇಲಾಖೆ ಅಧಿಕಾರಿಗಳು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ’ ಎಂದು ಹೇಳಿದ್ದಾರೆ.