‘ನಾನು ಬಹ್ರೇನ್ಗೆ ಹೋಗಿದ್ದರಿಂದ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇರಲಿಲ್ಲ. ಇದನ್ನು ತಿಳಿದು, ಹೊಸ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಸೇರ್ಪಡೆಗೊಳಿಸಿಕೊಂಡೆ. ಹೀಗಾಗಿ, ಈ ಬಾರಿ ಮತದಾನ ಮಾಡಲು ಸಾಧ್ಯವಾಯಿತು. ಮತದಾನ ಮಾಡಿದಾಗ ಮಾತ್ರ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಬರುತ್ತದೆ. ಅನಿವಾಸಿ ಭಾರತೀಯರಿಗೆ ಸರ್ಕಾರಗಳು ಹಲವಾರು ಸೌಲಭ್ಯಗಳನ್ನು ನೀಡಿವೆ. ಆ ಕೃತಜ್ಞತೆಯಿಂದಲಾದರೂ, ಮತ ಹಾಕಬೇಕು ಅನ್ನಿಸಿತ್ತು’ ಎಂದು ಅಲ್ಲಿನ ಕನ್ನಡ ಸಂಘದ ಕಾರ್ಯದರ್ಶಿಯೂ ಆಗಿರುವ ಅವರು ಪ್ರತಿಕ್ರಿಯಿಸಿದರು.