ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕಾಂಗ್ರೆಸ್‌ಗೆ ಕೇಶವಚಂದ್ ಅಧ್ಯಕ್ಷ

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉತ್ತರಪ್ರದೇಶದ ಕೇಶವಚಂದ್‌ ಯಾದವ್‌ ಹಾಗೂ ಉಪಾಧ್ಯಕ್ಷರಾಗಿ ಕರ್ನಾಟಕದ ಭದ್ರಾವತಿಯ ಬಿ.ವಿ ಶ್ರೀನಿವಾಸ್‌ ಅವರನ್ನು ನೇಮಕ ಮಾಡಲಾಗಿದೆ.

ಇದುವರೆಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡುತ್ತಿದ್ದ ಈ ಇಬ್ಬರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಜವಾಬ್ದಾರಿ ವಹಿಸಿದ್ದಾರೆ.

ಎರಡು ಬಾರಿ ಶಾಸಕರಾಗಿದ್ದ ಪಂಜಾಬ್‌ನ ಅಮರಿಂದರ್‌ ಸಿಂಗ್ ರಾಜ್‌ ಬಾರಾರ್ ಇದುವರೆಗೆ ಅಧ್ಯಕ್ಷರಾಗಿದ್ದರು. ಅವರ ಸ್ಥಾನಕ್ಕೆ ಯಾದವ್‌ ಅವರನ್ನು ನೇಮಕ ಮಾಡಲಾಗಿದೆ.

ಶ್ರೀನಿವಾಸ್ ಅವರು ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ನಂತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅವರನ್ನು ಮಧ್ಯಪ್ರದೇಶ ಹಾಗೂ ತೆಲಂಗಾಣ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT