ಶನಿವಾರ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆಯು ಮೇ 15ರಂದು ನಡೆಯಲಿದೆ. ಅಲ್ಲಿಯವರೆಗೆ ಮತಯಂತ್ರಗಳ ಭದ್ರತಾ ಕಾರ್ಯಕ್ಕೆ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಆ ಕಾರಣಕ್ಕಾಗಿ ರೇಸ್ಗಳಿಗೆ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರಿಂದ ಬಿಟಿಸಿ (ಬೆಂಗಳೂರು ಟರ್ಫ್ ಕ್ಲಬ್) ಈ ನಿರ್ಧಾರ ಕೈಗೊಂಡಿದೆ.