ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿದಂಬರಂ ಪ್ರಕರಣ ಕಾಂಗ್ರೆಸ್‌ ಪಾಲಿಗೆ ‘ನವಾಜ್‌ ಷರೀಫ್‌ ಪ್ರಕರಣ’ – ಬಿಜೆಪಿ

Last Updated 13 ಮೇ 2018, 11:11 IST
ಅಕ್ಷರ ಗಾತ್ರ

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ‘ಚಿದಂಬರಂ ಹಾಗೂ ಅವರ ಕುಟುಂಬದ ವಿರುದ್ಧ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಿದರೆ ಅದು ಕಾಂಗ್ರೆಸ್‌ ಪಾಲಿಗೆ ‘ನವಾಜ್‌ ಷರೀಫ್‌ ಪ್ರಕರಣ’ ಆಗಲಿದೆ ಎಂದು ಆರೋಪಿಸಿದೆ.

ಪ್ರಕರಣ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ‘ಅಕ್ರಮ ಆಸ್ತಿ ಸಂಪಾದನೆ ಹಾಗೂ ವಿದೇಶಗಳಲ್ಲಿ ಹಲವು ಖಾತೆಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದಂತೆ ಕಪ್ಪುಹಣ ಕಾನೂನಿನಡಿಯಲ್ಲಿ ಚಿದಂಬರಂ ಹಾಗೂ ಅವರ ಕುಟುಂಬದ ವಿರುದ್ಧ 4 ಚಾರ್ಜ್‌ಶೀಟ್‌ಗಳನ್ನು ನೀಡಲಾಗಿದೆ. ಅಕ್ರಮ ಆಸ್ತಿ ಮೊತ್ತ ₹ 20 ಸಾವಿರ ಕೋಟಿ ಎನ್ನಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT