ರಾಜ್ಯದಲ್ಲಿ ವಿಶ್ವದರ್ಜೆಯ ಹಲವು ಕಂಪನಿಗಳಿವೆ. ಮೋದಿ ಅವರ ಮಾತುಗಳಿಂದ ಹೂಡಿಕೆದಾರರಿಗೆ ತಪ್ಪುಸಂದೇಶ ರವಾನೆಯಾಗುತ್ತದೆ. ಬೆಂಗಳೂರು ‘ಸಿಲಿಕಾನ್ ಸಿಟಿ’ ಎಂಬ ಬಿರುದು ಪಡೆದಿದೆ. ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ದಕ್ಷಿಣದ ರಾಜ್ಯಗಳು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಯಾವುದೇ ರಾಜ್ಯ ಎಲ್ಲಾ ಕ್ಷೇತ್ರದಲ್ಲೂ ಮುಂದಿರಲು ಸಾಧ್ಯವಿಲ್ಲ. ಅಷ್ಟಕ್ಕೂ ನಮ್ಮ ರಾಜ್ಯವೇನೂ ದೈನೇಸಿ ಸ್ಥಿತಿಯಲ್ಲಿ ಇಲ್ಲ.