ಅಬ್ಬರದ ಚುನಾವಣಾ ಪ್ರಚಾರದಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಯೋಜನೆಗಳು ಮತ್ತು ಸಾಧನೆಗಳನ್ನು ಜನರ ಮುಂದಿಡುತ್ತಿದ್ದವು. ದೆಹಲಿ, ಮುಂಬೈ, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್, ಬಾಗಲಕೋಟೆ ಮೂಲದ ಮಾಧ್ಯಮ ಪ್ರತಿನಿಧಿಗಳು ಕೂಡ ಇಲ್ಲಿಯೇ ಠಿಕಾಣಿ ಹೀಡಿದ್ದರು. ಕ್ಷೇತ್ರದ ಕ್ಷಣ ಕ್ಷಣದ ಮಾಹಿತಿಗಳನ್ನು ದೇಶಕ್ಕೆ ತಲುಪಿಸುತ್ತಿದ್ದರು.