<p><strong>ರಾಮನಗರ: </strong>ಚನ್ನಪಟ್ಟಣ ಕ್ಷೇತ್ರದಲ್ಲಿ ಈ ಬಾರಿ ಹಣ, ತೋಳ್ಬಲ ಕೆಲಸ ಮಾಡಿದ್ದು, ನನ್ನ ಗೆಲುವು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸೋಮವಾರ ಮಾಧ್ಯಮದ ಮುಂದೆ ಅಳಲು ತೋಡಿಕೊಂಡರು.</p>.<p>ಕ್ಷೇತ್ರದಲ್ಲಿ ಕಡೆಯ ಎರಡು ದಿನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದಾಗಿ ನನ್ನ ವಿರುದ್ಧ ತಂತ್ರ ರೂಪಿಸಿದವು. ಡಿ.ಕೆ. ಶಿವಕುಮಾರ್ ರ ಕಪ್ಪು ಹಣ ಇಡೀ ಕ್ಷೇತ್ರದಲ್ಲಿ ಹರಿದಾಡಿತು. ನನ್ನ ಜೊತೆಗಿದ್ದ 20ಕ್ಕೂ ಹೆಚ್ಚು ಮುಖಂಡರನ್ನು ಕಾಂಗ್ರೆಸ್ ಖರೀದಿ ಮಾಡಿತು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಈ ಚುನಾವಣೆಯಲ್ಲಿ ಡಿಕೆಎಸ್ ಸಹೋದರರು ಎಚ್.ಎಂ. ರೇವಣ್ಣಗೆ ನನ್ನನ್ನು ರಾಜಕೀಯವಾಗಿ ಮುಗಿಸುವ ಸುಪಾರಿ ಕೊಟ್ಟರು. ಕುಮಾರಸ್ವಾಮಿ ಅದನ್ನು ಸದ್ಬಳಕೆ ಮಾಡಿಕೊಂಡರು ಎಂದು ಭಾವುಕರಾದರು</p>.<p>‘ಯಾರೇ ಗೆದ್ದರೂ ಕೂದಲೆಳೆ ಅಂತರದ ಗೆಲುವಷ್ಟೇ. ಒಂದು ವೇಳೆ ನಾನು ಸೋತರೂ ಬಿಜೆಪಿಯಲ್ಲಿಯೇ ಉಳಿಯುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಉಪ ಚುನಾವಣೆ ನಡೆದಲ್ಲಿ ಪಕ್ಷ ಬಯಸಿದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಚನ್ನಪಟ್ಟಣ ಕ್ಷೇತ್ರದಲ್ಲಿ ಈ ಬಾರಿ ಹಣ, ತೋಳ್ಬಲ ಕೆಲಸ ಮಾಡಿದ್ದು, ನನ್ನ ಗೆಲುವು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸೋಮವಾರ ಮಾಧ್ಯಮದ ಮುಂದೆ ಅಳಲು ತೋಡಿಕೊಂಡರು.</p>.<p>ಕ್ಷೇತ್ರದಲ್ಲಿ ಕಡೆಯ ಎರಡು ದಿನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದಾಗಿ ನನ್ನ ವಿರುದ್ಧ ತಂತ್ರ ರೂಪಿಸಿದವು. ಡಿ.ಕೆ. ಶಿವಕುಮಾರ್ ರ ಕಪ್ಪು ಹಣ ಇಡೀ ಕ್ಷೇತ್ರದಲ್ಲಿ ಹರಿದಾಡಿತು. ನನ್ನ ಜೊತೆಗಿದ್ದ 20ಕ್ಕೂ ಹೆಚ್ಚು ಮುಖಂಡರನ್ನು ಕಾಂಗ್ರೆಸ್ ಖರೀದಿ ಮಾಡಿತು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಈ ಚುನಾವಣೆಯಲ್ಲಿ ಡಿಕೆಎಸ್ ಸಹೋದರರು ಎಚ್.ಎಂ. ರೇವಣ್ಣಗೆ ನನ್ನನ್ನು ರಾಜಕೀಯವಾಗಿ ಮುಗಿಸುವ ಸುಪಾರಿ ಕೊಟ್ಟರು. ಕುಮಾರಸ್ವಾಮಿ ಅದನ್ನು ಸದ್ಬಳಕೆ ಮಾಡಿಕೊಂಡರು ಎಂದು ಭಾವುಕರಾದರು</p>.<p>‘ಯಾರೇ ಗೆದ್ದರೂ ಕೂದಲೆಳೆ ಅಂತರದ ಗೆಲುವಷ್ಟೇ. ಒಂದು ವೇಳೆ ನಾನು ಸೋತರೂ ಬಿಜೆಪಿಯಲ್ಲಿಯೇ ಉಳಿಯುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಉಪ ಚುನಾವಣೆ ನಡೆದಲ್ಲಿ ಪಕ್ಷ ಬಯಸಿದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>