<p><strong>ನವದೆಹಲಿ: </strong>ಕರ್ನಾಟಕ ಮತ್ತು ತಮಿಳುನಾಡು ನಡುವಿನ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕೆ ಕಾವೇರಿ ನದಿ ನೀರು ಹಂಚಿಕೆ ಕುರಿತ ಯೋಜನೆ (ಸ್ಕೀಂ) ರೂಪಿಸುವ ನಿಟ್ಟಿನಲ್ಲಿ ಕರಡನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದೆ.</p>.<p>ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಮಾದರಿಯಲ್ಲೇ ಯೋಜನೆ ರೂಪಿಸಿ ಪ್ರಾಧಿಕಾರ ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಿಯಮ ನಿಬಂಧನೆಗಳು ಮಂಡಳಿ ಮಾದರಿಯಲ್ಲೇ ಇರುವುದು ಗೋಚರವಾಗಿದೆ.</p>.<p><strong>ಸ್ಕೀಂ ಕರಡಿನ ಮುಖ್ಯಾಂಶಗಳು</strong><br /> * ನ್ಯಾಯಮಂಡಳಿ ಆದೇಶ ಮಾರ್ಪಡಿಸಿ ತೀರ್ಪಿನ ಅನ್ವಯ ಪ್ರಾಧಿಕಾರದ ಸ್ವರೂಪದ ಸ್ಕೀಂ ರಚನೆ.</p>.<p>* ಪ್ರಾಧಿಕಾರ ಕಾವೇರಿ ನೀರಿನ ಸಂಗ್ರಹ, ಹಂಚಿಕೆ ಮತ್ತು ನಿಯಂತ್ರಣ ಕುರಿತು ಗಮನಹರಿಸಲಿದೆ.</p>.<p>* ಜಲಾಶಯಗಳ ಮೇಲುಸ್ತುವಾರಿ ಹಾಗೂ ನೀರು ಬಿಡುಗಡೆಗೆ ಸಮಿತಿಯ ಸಹಕಾರ ಪಡೆಯಲಿದೆ.</p>.<p>* ಬಿಳಿಗುಂಡ್ಲು ಮಾಪಕ ಕೇಂದ್ರದ ಮೂಲಕ ನೀರಿನ ಅಳತೆ ಮಾಡುವ ಜವಾಬ್ದಾರಿ ಕೂಡ ಪ್ರಾಧಿಕಾರದ್ದಾಗಿರುತ್ತದೆ.</p>.<p>* ಪ್ರಾಧಿಕಾರ ತನ್ನ ಸಹಾಯಕ್ಕಾಗಿ ಒಂದು ಅಥವಾ ಎರಡು ಸಮಿತಿ ನೇಮಿಸಿಕೊಳ್ಳುವ ಅಧಿಕಾರ ಹೊಂದಿರುತ್ತದೆ.</p>.<p>* ಪ್ರಾಧಿಕಾರವು ನೀರಿನ ಒಳಹರಿವು, ಸಂಗ್ರಹ, ಬಳಕೆ ಮತ್ತು ಬಿಡುಗಡೆ ಕುರಿತಂತೆ 10 ದಿನಕ್ಕೊಮ್ಮೆ ಪರಿಶೀಲಿಸಲಿದೆ.</p>.<p>* ಸಂಬಂಧಿಸಿದ ರಾಜ್ಯಗಳಿಗೆ ನಿಯಮಿತವಾಗಿ ನೀರನ್ನು ಪಡೆಯಲು ಅವಕಾಶ ನೀಡಲಿದೆ.</p>.<p>* ಹಂಚಿಕೆಯಾದ ನೀರನ್ನು ಸಂಬಂಧಿಸಿದ ರಾಜ್ಯಗಳಿಗೆ ಕೊಡಿಸಲು ಪ್ರಾಧಿಕಾರವು ಪ್ರಯತ್ನಿಸಲಿದೆ.</p>.<p>* ಮಳೆ ಕೊರತೆಯನ್ನು ಪರಿಶೀಲಿಸಿ ಅರಿಯಲಿರುವ ಪ್ರಾಧಿಕಾರವು ಕೊರತೆಗೆ ಅನುಗುಣವಾಗಿಯೇ ನೀರು ಹಂಚಲಿದೆ.</p>.<p>* ಆಯಾ ರಾಜ್ಯಗಳ ಬೆಳೆಯ ಪ್ರಮಾಣ, ಬೆಳೆ ಪದ್ಧತಿ, ನೀರಾವರಿ ಅವಲಂಭನೆ ಅರಿತು ಮತ್ತು ಕುಡಿಯುವ ಹಾಗೂ ಕೈಗಾರಿಕೆಗೂ ಮಳೆಯ ಪ್ರಮಾಣ ಆಧರಿಸಿಯೇ ನಿರ್ಧರಿಸಲಿದೆ.</p>.<p>* ಪ್ರಾಧಿಕಾರವು ಅತ್ಯುತ್ತಮ ಸಂವಹನ ಜಾಲ ರೂಪಿಸಿ ಎಲ್ಲಾ ಅಂಕಿ ಅಂಶಗಳು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಲಿದೆ.</p>.<p>* ಇದಕ್ಕಾಗಿ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಪಡೆಯಲಿದೆ.</p>.<p>* ಕಣಿವೆ ವ್ಯಾಪ್ತಿಯ ರಾಜ್ಯಗಳು ಆಯಾ ವರ್ಷದ ಬೇಡಿಕೆ ಪಟ್ಟಿಯನ್ನು ಜಲವರ್ಷದ ಆರಂಭದಲ್ಲೇ ಪ್ರಾಧಿಕಾರಕ್ಕೆ ನೀಡುವುದು ಕಡ್ಡಾಯ.</p>.<p>* ಬೇರೆ ಬೇರೆ ಜಲಾನಯನ ಪ್ರದೇಶಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಸುರಿಯುವ ಮಳೆಯ ಪ್ರಮಾಣ ಆಧರಿಸಿ ಬೇಡಿಕೆ ಪಟ್ಟಿ ತಯಾರಿಸುವುದು ಕಡ್ಡಾಯ.</p>.<p>* ಕಾವೇರಿ ಕಣಿವೆಯಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಯನ್ನು ಪರಿಶೀಲಿಸುವ ಪ್ರಾಧಿಕಾರ ಹಾಗೂ ಅದರ ಸದಸ್ಯರಿಗೆ ಇರುತ್ತದೆ.</p>.<p>* ರಾಜ್ಯಗಳು ತೀರ್ಪನ ಅನುಷ್ಠಾನಕ್ಕೆ ಸಮ್ಮತಿಸದಿದ್ದರೆ ಮತ್ತೆ ಕೇಂದ್ರ ಸರ್ಕಾರದ ಮೊರೆಹೋಗುವುದು.</p>.<p>* ನೀರಿನ ಸದ್ಭಳಕೆ ಮತ್ತು ಸಂಗ್ರಹ ಕುರಿತಂತೆ ಪ್ರಾಧಿಕಾರವು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವ ಅಧಿಕಾರ ಹೊಂದಿದೆ.</p>.<p>* ಕಾವೇರಿ ಜಲ ನಿಯಂತ್ರಣ ಸಮಿತಿ ಅಗತ್ಯ ಎಂದು ಕಂಡುಬಂದಲ್ಲಿ ಅದನ್ನು ರಚಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರುತ್ತದೆ.</p>.<p>* ಬೆಳೆಯ ಪದ್ಧತಿಯಲ್ಲಿ ಬದಲಾವಣೆ ಹಾಗೂ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಮೂಲಕ ನೀರಿನ ನಿಯಮಿತ ಬಳಕೆ ಬಗ್ಗೆ ಪ್ರಾಧಿಕಾರವು ಸಲಹೆ ನೀಡಬೇಕು.</p>.<p>* ಪ್ರಾಧಿಕಾರವು ಪ್ರತಿವರ್ಷ ಸೆಪ್ಟೆಂಬರ್ 30ರೊಳಗೆ ತನ್ನ ಕಾರ್ಯಚಟುವಟಿ ಒಳನ್ನೊಳಗೊಂಡ ಪಟ್ಟಿಯನ್ನು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ನೀಡಬೇಕು.</p>.<p>* ಪ್ರಾಧಿಕಾರದಲ್ಲಿ ಇರುವ ಮಾಹಿತಿಯನ್ನು ರಾಜ್ಯಗಳು ಬಯಸಿದಾಗ ಕೊಡಬೇಕು.</p>.<p>* ನೀರಿನ ಸಂಗ್ರಹ, ಬಳಕೆ, ಬಿಡುಗಡೆ, ಮಾಪನ ಕೇಂದ್ರಗಳ ಅಳವಡಿಕೆಯ ಖರ್ಚು ವೆಚ್ಚವನ್ನು ಆಯಾ ವ್ಯಾಪ್ತಿಯ ರಾಜ್ಯಗಳೇ ಭರಿಸಬೇಕು.</p>.<p>* ಪ್ರಾಧಿಕಾರದ ಸಭೆ ಮತ್ತು ಚಟುವಟಿಕೆಗಳ ಎಲ್ಲಾ ದಾಖಲೆಗಳು ಹಾಗೂ ಲೆಕ್ಕಪತ್ರ ಸಂಗ್ರಹಿಸಿಡಲು ಸೂಕ್ತವಾದ ಕಚೇರಿ ಸ್ಥಾಪಿಸಬೇಕು.</p>.<p>* ದಾಖಲೆಗಳು ಮತ್ತು ಮಾಪನ ದತ್ತಾಂಶಗಳು ಈ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಲಭ್ಯ ಇರಬೇಕು.</p>.<p>* ಈ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಗಳು ನೇಮಕ ಪ್ರಕ್ರಿಯೆ ಕೇಂದ್ರ ಸರ್ಕಾರದ ನಿಯಾಮವಳಿಗಳ ಪ್ರಕಾರ ಆಗಬೇಕು.</p>.<p>* ಪ್ರಾಧಿಕಾರದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲೇ ಇರಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕರ್ನಾಟಕ ಮತ್ತು ತಮಿಳುನಾಡು ನಡುವಿನ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕೆ ಕಾವೇರಿ ನದಿ ನೀರು ಹಂಚಿಕೆ ಕುರಿತ ಯೋಜನೆ (ಸ್ಕೀಂ) ರೂಪಿಸುವ ನಿಟ್ಟಿನಲ್ಲಿ ಕರಡನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದೆ.</p>.<p>ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಮಾದರಿಯಲ್ಲೇ ಯೋಜನೆ ರೂಪಿಸಿ ಪ್ರಾಧಿಕಾರ ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಿಯಮ ನಿಬಂಧನೆಗಳು ಮಂಡಳಿ ಮಾದರಿಯಲ್ಲೇ ಇರುವುದು ಗೋಚರವಾಗಿದೆ.</p>.<p><strong>ಸ್ಕೀಂ ಕರಡಿನ ಮುಖ್ಯಾಂಶಗಳು</strong><br /> * ನ್ಯಾಯಮಂಡಳಿ ಆದೇಶ ಮಾರ್ಪಡಿಸಿ ತೀರ್ಪಿನ ಅನ್ವಯ ಪ್ರಾಧಿಕಾರದ ಸ್ವರೂಪದ ಸ್ಕೀಂ ರಚನೆ.</p>.<p>* ಪ್ರಾಧಿಕಾರ ಕಾವೇರಿ ನೀರಿನ ಸಂಗ್ರಹ, ಹಂಚಿಕೆ ಮತ್ತು ನಿಯಂತ್ರಣ ಕುರಿತು ಗಮನಹರಿಸಲಿದೆ.</p>.<p>* ಜಲಾಶಯಗಳ ಮೇಲುಸ್ತುವಾರಿ ಹಾಗೂ ನೀರು ಬಿಡುಗಡೆಗೆ ಸಮಿತಿಯ ಸಹಕಾರ ಪಡೆಯಲಿದೆ.</p>.<p>* ಬಿಳಿಗುಂಡ್ಲು ಮಾಪಕ ಕೇಂದ್ರದ ಮೂಲಕ ನೀರಿನ ಅಳತೆ ಮಾಡುವ ಜವಾಬ್ದಾರಿ ಕೂಡ ಪ್ರಾಧಿಕಾರದ್ದಾಗಿರುತ್ತದೆ.</p>.<p>* ಪ್ರಾಧಿಕಾರ ತನ್ನ ಸಹಾಯಕ್ಕಾಗಿ ಒಂದು ಅಥವಾ ಎರಡು ಸಮಿತಿ ನೇಮಿಸಿಕೊಳ್ಳುವ ಅಧಿಕಾರ ಹೊಂದಿರುತ್ತದೆ.</p>.<p>* ಪ್ರಾಧಿಕಾರವು ನೀರಿನ ಒಳಹರಿವು, ಸಂಗ್ರಹ, ಬಳಕೆ ಮತ್ತು ಬಿಡುಗಡೆ ಕುರಿತಂತೆ 10 ದಿನಕ್ಕೊಮ್ಮೆ ಪರಿಶೀಲಿಸಲಿದೆ.</p>.<p>* ಸಂಬಂಧಿಸಿದ ರಾಜ್ಯಗಳಿಗೆ ನಿಯಮಿತವಾಗಿ ನೀರನ್ನು ಪಡೆಯಲು ಅವಕಾಶ ನೀಡಲಿದೆ.</p>.<p>* ಹಂಚಿಕೆಯಾದ ನೀರನ್ನು ಸಂಬಂಧಿಸಿದ ರಾಜ್ಯಗಳಿಗೆ ಕೊಡಿಸಲು ಪ್ರಾಧಿಕಾರವು ಪ್ರಯತ್ನಿಸಲಿದೆ.</p>.<p>* ಮಳೆ ಕೊರತೆಯನ್ನು ಪರಿಶೀಲಿಸಿ ಅರಿಯಲಿರುವ ಪ್ರಾಧಿಕಾರವು ಕೊರತೆಗೆ ಅನುಗುಣವಾಗಿಯೇ ನೀರು ಹಂಚಲಿದೆ.</p>.<p>* ಆಯಾ ರಾಜ್ಯಗಳ ಬೆಳೆಯ ಪ್ರಮಾಣ, ಬೆಳೆ ಪದ್ಧತಿ, ನೀರಾವರಿ ಅವಲಂಭನೆ ಅರಿತು ಮತ್ತು ಕುಡಿಯುವ ಹಾಗೂ ಕೈಗಾರಿಕೆಗೂ ಮಳೆಯ ಪ್ರಮಾಣ ಆಧರಿಸಿಯೇ ನಿರ್ಧರಿಸಲಿದೆ.</p>.<p>* ಪ್ರಾಧಿಕಾರವು ಅತ್ಯುತ್ತಮ ಸಂವಹನ ಜಾಲ ರೂಪಿಸಿ ಎಲ್ಲಾ ಅಂಕಿ ಅಂಶಗಳು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಲಿದೆ.</p>.<p>* ಇದಕ್ಕಾಗಿ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಪಡೆಯಲಿದೆ.</p>.<p>* ಕಣಿವೆ ವ್ಯಾಪ್ತಿಯ ರಾಜ್ಯಗಳು ಆಯಾ ವರ್ಷದ ಬೇಡಿಕೆ ಪಟ್ಟಿಯನ್ನು ಜಲವರ್ಷದ ಆರಂಭದಲ್ಲೇ ಪ್ರಾಧಿಕಾರಕ್ಕೆ ನೀಡುವುದು ಕಡ್ಡಾಯ.</p>.<p>* ಬೇರೆ ಬೇರೆ ಜಲಾನಯನ ಪ್ರದೇಶಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಸುರಿಯುವ ಮಳೆಯ ಪ್ರಮಾಣ ಆಧರಿಸಿ ಬೇಡಿಕೆ ಪಟ್ಟಿ ತಯಾರಿಸುವುದು ಕಡ್ಡಾಯ.</p>.<p>* ಕಾವೇರಿ ಕಣಿವೆಯಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಯನ್ನು ಪರಿಶೀಲಿಸುವ ಪ್ರಾಧಿಕಾರ ಹಾಗೂ ಅದರ ಸದಸ್ಯರಿಗೆ ಇರುತ್ತದೆ.</p>.<p>* ರಾಜ್ಯಗಳು ತೀರ್ಪನ ಅನುಷ್ಠಾನಕ್ಕೆ ಸಮ್ಮತಿಸದಿದ್ದರೆ ಮತ್ತೆ ಕೇಂದ್ರ ಸರ್ಕಾರದ ಮೊರೆಹೋಗುವುದು.</p>.<p>* ನೀರಿನ ಸದ್ಭಳಕೆ ಮತ್ತು ಸಂಗ್ರಹ ಕುರಿತಂತೆ ಪ್ರಾಧಿಕಾರವು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವ ಅಧಿಕಾರ ಹೊಂದಿದೆ.</p>.<p>* ಕಾವೇರಿ ಜಲ ನಿಯಂತ್ರಣ ಸಮಿತಿ ಅಗತ್ಯ ಎಂದು ಕಂಡುಬಂದಲ್ಲಿ ಅದನ್ನು ರಚಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರುತ್ತದೆ.</p>.<p>* ಬೆಳೆಯ ಪದ್ಧತಿಯಲ್ಲಿ ಬದಲಾವಣೆ ಹಾಗೂ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಮೂಲಕ ನೀರಿನ ನಿಯಮಿತ ಬಳಕೆ ಬಗ್ಗೆ ಪ್ರಾಧಿಕಾರವು ಸಲಹೆ ನೀಡಬೇಕು.</p>.<p>* ಪ್ರಾಧಿಕಾರವು ಪ್ರತಿವರ್ಷ ಸೆಪ್ಟೆಂಬರ್ 30ರೊಳಗೆ ತನ್ನ ಕಾರ್ಯಚಟುವಟಿ ಒಳನ್ನೊಳಗೊಂಡ ಪಟ್ಟಿಯನ್ನು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ನೀಡಬೇಕು.</p>.<p>* ಪ್ರಾಧಿಕಾರದಲ್ಲಿ ಇರುವ ಮಾಹಿತಿಯನ್ನು ರಾಜ್ಯಗಳು ಬಯಸಿದಾಗ ಕೊಡಬೇಕು.</p>.<p>* ನೀರಿನ ಸಂಗ್ರಹ, ಬಳಕೆ, ಬಿಡುಗಡೆ, ಮಾಪನ ಕೇಂದ್ರಗಳ ಅಳವಡಿಕೆಯ ಖರ್ಚು ವೆಚ್ಚವನ್ನು ಆಯಾ ವ್ಯಾಪ್ತಿಯ ರಾಜ್ಯಗಳೇ ಭರಿಸಬೇಕು.</p>.<p>* ಪ್ರಾಧಿಕಾರದ ಸಭೆ ಮತ್ತು ಚಟುವಟಿಕೆಗಳ ಎಲ್ಲಾ ದಾಖಲೆಗಳು ಹಾಗೂ ಲೆಕ್ಕಪತ್ರ ಸಂಗ್ರಹಿಸಿಡಲು ಸೂಕ್ತವಾದ ಕಚೇರಿ ಸ್ಥಾಪಿಸಬೇಕು.</p>.<p>* ದಾಖಲೆಗಳು ಮತ್ತು ಮಾಪನ ದತ್ತಾಂಶಗಳು ಈ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಲಭ್ಯ ಇರಬೇಕು.</p>.<p>* ಈ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಗಳು ನೇಮಕ ಪ್ರಕ್ರಿಯೆ ಕೇಂದ್ರ ಸರ್ಕಾರದ ನಿಯಾಮವಳಿಗಳ ಪ್ರಕಾರ ಆಗಬೇಕು.</p>.<p>* ಪ್ರಾಧಿಕಾರದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲೇ ಇರಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>