‘ಸತೀಶ್ ಸೈಲ್ ಅವರು ಅಂಕೋಲಾ ತಾಲ್ಲೂಕಿನ ಅವರ್ಸಾ ಗ್ರಾಮದ ಸಕಲಬೇಣದಲ್ಲಿರುವ ತಮ್ಮ ಆಪ್ತ ಮಂಗಲದಾಸ್ ಕಾಮತ್ ಅವರ ಕಚೇರಿಯಲ್ಲಿ ಹಣ ಹಂಚುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಈ ಸಂಬಂಧ ಮೇ 11ರಂದು ಬೆಳಿಗ್ಗೆ 6ಗಂಟೆಗೆ ದಾಳಿ ಮಾಡಲಾಗಿತ್ತು. ತಪಾಸಣೆ ಮಾಡುವ ಸಲುವಾಗಿ ಸೈಲ್ ಅವರ ಕಾರನ್ನು ನಿಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದರು. ಆದರೆ, ಅವರು ಕಾರನ್ನು ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದರು. ಈ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.