ಈಚಿನ ವರ್ಷಗಳಲ್ಲಂತೂ ಚುನಾವಣಾ ಅಕ್ರಮಗಳನ್ನು ಜನರು ಒಪ್ಪಿಕೊಂಡಂತೆ ಭಾಸವಾಗುತ್ತಿದೆ. ಈ ಪರಿಸ್ಥಿತಿ ಬದಲಾಗಿ, ಅಕ್ರಮಗಳನ್ನು ಖಂಡಿಸುವ ಮನಸ್ಥಿತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ‘ನಮಗ್ಯಾಕೆ ಇಲ್ಲದ ಉಸಾಬರಿ’ ಎಂಬ ಮನೋಭಾವ ದೂರವಾಗಿ, ಪ್ರಜಾಪ್ರಭುತ್ವದ ಮೌಲ್ಯ ಉಳಿಸುವುದು ಎಲ್ಲರ ಜವಾಬ್ದಾರಿಯಾದಾಗ ಮಾತ್ರ ಸುಂದರವಾದ ಪ್ರಜಾತಂತ್ರ ವ್ಯವಸ್ಥೆ ರೂಪಿಸುವುದು ಸಾಧ್ಯವಾದೀತು.