<p><strong>ಹೈದರಾಬಾದ್: </strong>ಬಿಜೆಪಿ ಸೇರ್ಪಡೆಗೊಂಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಕನ್ನಾ ಲಕ್ಷ್ಮೀನಾರಾಯಣ ಅವರನ್ನು ಆಂಧ್ರ ಪ್ರದೇಶ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದು, ಇದರಿಂದ ಬಿಜೆಪಿಯ ಒಂದು ವರ್ಗದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೆಂದು ಬಿಂಬಿತರಾಗಿದ್ದ ಸೋಮು ವೀರಾಜು ಅವರನ್ನು, ಚುನಾವಣೆ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ವೀರಾಜು ಅವರೇ ಅಧ್ಯಕ್ಷರಾಗಬಹುದು ಎಂಬ ಸುದ್ದಿ ಬಲವಾಗಿ ಕೇಳಿ ಬಂದಿತ್ತು. ಅಧ್ಯಕ್ಷರನ್ನಾಗಿ ಮಾಡದೆ ಇರುವುದರಿಂದ ಅವರು ಆಕ್ರೋಶಗೊಂಡಿದ್ದಾರೆ.</p>.<p>ಪಕ್ಷದ ನಿರ್ಣಯವನ್ನು ರಾಜಮಹೇಂದ್ರಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಬೊಮ್ಮುಲ ದತ್ತು ವಿರೋಧಿಸಿದ್ದು, ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೀರ್ರಾಜು ಅವರಿಗೆ ಸ್ಥಾನ ನೀಡದಿದ್ದರೆ ಪೂರ್ವ ಮತ್ತು ಗೋದಾವರಿ ಜಿಲ್ಲೆಗಳ ಹಲವು ಬಿಜೆಪಿ ಮುಖಂಡರು ಸಹ ರಾಜೀನಾಮೆ ನೀಡಲಿದ್ದಾರೆ ಎಂದು ದತ್ತು ಹೇಳಿದ್ದಾರೆ. </p>.<p>ಕಮ್ಮ ಸಮುದಾಯದವರಿಗೆ ಹೆಚ್ಚು ಪ್ರಾತಿನಿಧ್ಯ ನೀಡಿರುವ ಟಿಡಿಪಿ ಹಾಗೂ ರೆಡ್ಡಿ ಸಮುದಾಯದವರು ಹೆಚ್ಚಾಗಿರುವ ವೈಎಸ್ಆರ್ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳುವ ಸಲುವಾಗಿ ಕಾಪು ಸಮುದಾಯದ ಪ್ರಬಲ ನಾಯಕರಾಗಿರುವ ಕನ್ನಾ ಅವರನ್ನು ಬಿಜೆಪಿ ಆಯ್ಕೆ ಮಾಡಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಬಿಜೆಪಿ ಸೇರ್ಪಡೆಗೊಂಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಕನ್ನಾ ಲಕ್ಷ್ಮೀನಾರಾಯಣ ಅವರನ್ನು ಆಂಧ್ರ ಪ್ರದೇಶ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದು, ಇದರಿಂದ ಬಿಜೆಪಿಯ ಒಂದು ವರ್ಗದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೆಂದು ಬಿಂಬಿತರಾಗಿದ್ದ ಸೋಮು ವೀರಾಜು ಅವರನ್ನು, ಚುನಾವಣೆ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ವೀರಾಜು ಅವರೇ ಅಧ್ಯಕ್ಷರಾಗಬಹುದು ಎಂಬ ಸುದ್ದಿ ಬಲವಾಗಿ ಕೇಳಿ ಬಂದಿತ್ತು. ಅಧ್ಯಕ್ಷರನ್ನಾಗಿ ಮಾಡದೆ ಇರುವುದರಿಂದ ಅವರು ಆಕ್ರೋಶಗೊಂಡಿದ್ದಾರೆ.</p>.<p>ಪಕ್ಷದ ನಿರ್ಣಯವನ್ನು ರಾಜಮಹೇಂದ್ರಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಬೊಮ್ಮುಲ ದತ್ತು ವಿರೋಧಿಸಿದ್ದು, ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೀರ್ರಾಜು ಅವರಿಗೆ ಸ್ಥಾನ ನೀಡದಿದ್ದರೆ ಪೂರ್ವ ಮತ್ತು ಗೋದಾವರಿ ಜಿಲ್ಲೆಗಳ ಹಲವು ಬಿಜೆಪಿ ಮುಖಂಡರು ಸಹ ರಾಜೀನಾಮೆ ನೀಡಲಿದ್ದಾರೆ ಎಂದು ದತ್ತು ಹೇಳಿದ್ದಾರೆ. </p>.<p>ಕಮ್ಮ ಸಮುದಾಯದವರಿಗೆ ಹೆಚ್ಚು ಪ್ರಾತಿನಿಧ್ಯ ನೀಡಿರುವ ಟಿಡಿಪಿ ಹಾಗೂ ರೆಡ್ಡಿ ಸಮುದಾಯದವರು ಹೆಚ್ಚಾಗಿರುವ ವೈಎಸ್ಆರ್ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳುವ ಸಲುವಾಗಿ ಕಾಪು ಸಮುದಾಯದ ಪ್ರಬಲ ನಾಯಕರಾಗಿರುವ ಕನ್ನಾ ಅವರನ್ನು ಬಿಜೆಪಿ ಆಯ್ಕೆ ಮಾಡಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>