ಎನ್ಡಿಟಿವಿಯ ಜೊತೆ ಮಾತನಾಡಿರುವ ಡಿ.ಕೆ.ಶಿವಕುಮಾರ್ 'ರಾಹುಲ್ ಗಾಂಧಿ ಸಾಕಷ್ಟು ಪ್ರಯತ್ನಪಟ್ಟರು. ಸ್ಥಳೀಯ ನಾಯಕತ್ವ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿತ್ತು. ಅದರಲ್ಲಿ ನಾವು ಸೋತೆವು' ಎಂದಿದ್ದಾರೆ.
'ಪಕ್ಷ ಈ ಮಟ್ಟದ ಸೋಲನ್ನು ನಿರೀಕ್ಷಿಸಿರಲಿಲ್ಲ. ಸ್ಥಳೀಯ ನಾಯಕರ ಮಟ್ಟಿಗೆ ಇದೊಂದು ಒಳ್ಳೆಯ ಬೆಳವಣಿಗೆಯಲ್ಲ' ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ತಿವಿದಿದ್ದಾರೆ.
ಮೋದಿ ಅಲೆ ಇದ್ದುದರಿಂದ ಬಿಜೆಪಿಗೆ ಗೆಲುವಾಗಿದೆ ಎಂಬುದನ್ನು ಅವರು ಒಪ್ಪಿಲ್ಲ. ಬದಲಿಗೆ 'ಇದು ನಮ್ಮದೇ ಸೋಲು. ನಾವು ಕ್ಷೇತ್ರ ಮಟ್ಟದಲ್ಲಿ ಇನ್ನೂ ಹೆಚ್ಚು ಎಚ್ಚರದಿಂದ ಇರಬೇಕಾಗಿತ್ತು ಎಂದಿದ್ದಾರೆ.'
ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಸೋಲಿಗೆ ಜಾತಿ ಕಾರಣವಾಗಿದೆ. ನಾವಂದುಕೊಂಡಂತೆ ಸಂಭವಿಸಲಿಲ್ಲ ಎಂದು ರಾಹುಲ್ ಗಾಂಧಿ ನಾಯಕತ್ವವನ್ನು ಸಮರ್ಥಿಸಿಕೊಂಡರು.