<p><strong>ಚಿತ್ರದುರ್ಗ</strong>: ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ, ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಕೋಟೆನಾಡಿನ ಮೊದಲ ಶಾಸಕಿ ಎಂಬ ದಾಖಲೆಗೆ ಪಾತ್ರವಾಗಿದ್ದಾರೆ.</p>.<p>ಜೆಡಿಎಸ್ ಮುಖಂಡ ದಿವಂಗತ ಕೆ. ಕೃಷ್ಣಪ್ಪ ಅವರ ಪುತ್ರಿ ಕೆ. ಪೂರ್ಣಿಮಾ, ಮೂಲತಃ ಬೆಂಗಳೂರಿನವರು. ಬಿಬಿಎಂಪಿಯಲ್ಲಿ ಎರಡು ಬಾರಿ ಕಾರ್ಪೊರೇಟರ್ ಆಗಿದ್ದರು. ಯಾದವ ಸಮುದಾಯದ ಮುಖಂಡರಾಗಿರುವ ಕೆ. ಕೃಷ್ಣಪ್ಪ ಕಳೆದ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ, ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಸೋತ ನಂತರವೂ ಕ್ಷೇತ್ರದಲ್ಲಿ ಪಕ್ಷದ ಕಚೇರಿ ತೆರೆದು, ಜನರ ಸೇವೆಗೆ ಮುಂದಾಗಿದ್ದರು. ಆದರೆ, ಕೆಲವು ತಿಂಗಳುಗಳಲ್ಲಿ ಅನಾರೋಗ್ಯದ ಕಾರಣದಿಂದ ಅವರು ನಿಧನರಾದರು.</p>.<p>ತಂದೆಯ ನಿಧನದ ನಂತರ ಕ್ಷೇತ್ರದ ಜತೆ ನಿರಂತರ ಸಂಪರ್ಕವಿಟ್ಟುಕೊಂಡಿದ್ದ ಪೂರ್ಣಿಮಾ, ಪತಿ ಡಿ.ಟಿ.ಶ್ರೀನಿವಾಸ್ ಅವರ ಜತೆ ನಾಲ್ಕು ವರ್ಷಗಳಿಂದ ಕ್ಷೇತ್ರ ಪ್ರವಾಸ ಮಾಡಿದ್ದರು. ಅಧಿಕಾರದಲ್ಲಿ ಇಲ್ಲದಿದ್ದರೂ ಜನರೊಟ್ಟಿಗೆ ಬೆರೆತಿದ್ದ ಅವರು, ಕ್ಷೇತ್ರದಲ್ಲಿ ಹೆಸರು ಗಳಿಸಿದ್ದರು.</p>.<p>ಸ್ವಜಾತಿಯವರೇ ಹೆಚ್ಚಿರುವ ಕ್ಷೇತ್ರ, ಒಂದು ಕಡೆ ತಂದೆಯ ಹೆಸರು, ಮಹಿಳೆ ಎಂಬ ಅಂಶದ ಜತೆಗೆ ಕ್ಷೇತ್ರದಲ್ಲಿನ ಆಡಳಿತ ವಿರೋಧಿ ಅಲೆ ಅವರ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ, ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಕೋಟೆನಾಡಿನ ಮೊದಲ ಶಾಸಕಿ ಎಂಬ ದಾಖಲೆಗೆ ಪಾತ್ರವಾಗಿದ್ದಾರೆ.</p>.<p>ಜೆಡಿಎಸ್ ಮುಖಂಡ ದಿವಂಗತ ಕೆ. ಕೃಷ್ಣಪ್ಪ ಅವರ ಪುತ್ರಿ ಕೆ. ಪೂರ್ಣಿಮಾ, ಮೂಲತಃ ಬೆಂಗಳೂರಿನವರು. ಬಿಬಿಎಂಪಿಯಲ್ಲಿ ಎರಡು ಬಾರಿ ಕಾರ್ಪೊರೇಟರ್ ಆಗಿದ್ದರು. ಯಾದವ ಸಮುದಾಯದ ಮುಖಂಡರಾಗಿರುವ ಕೆ. ಕೃಷ್ಣಪ್ಪ ಕಳೆದ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ, ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಸೋತ ನಂತರವೂ ಕ್ಷೇತ್ರದಲ್ಲಿ ಪಕ್ಷದ ಕಚೇರಿ ತೆರೆದು, ಜನರ ಸೇವೆಗೆ ಮುಂದಾಗಿದ್ದರು. ಆದರೆ, ಕೆಲವು ತಿಂಗಳುಗಳಲ್ಲಿ ಅನಾರೋಗ್ಯದ ಕಾರಣದಿಂದ ಅವರು ನಿಧನರಾದರು.</p>.<p>ತಂದೆಯ ನಿಧನದ ನಂತರ ಕ್ಷೇತ್ರದ ಜತೆ ನಿರಂತರ ಸಂಪರ್ಕವಿಟ್ಟುಕೊಂಡಿದ್ದ ಪೂರ್ಣಿಮಾ, ಪತಿ ಡಿ.ಟಿ.ಶ್ರೀನಿವಾಸ್ ಅವರ ಜತೆ ನಾಲ್ಕು ವರ್ಷಗಳಿಂದ ಕ್ಷೇತ್ರ ಪ್ರವಾಸ ಮಾಡಿದ್ದರು. ಅಧಿಕಾರದಲ್ಲಿ ಇಲ್ಲದಿದ್ದರೂ ಜನರೊಟ್ಟಿಗೆ ಬೆರೆತಿದ್ದ ಅವರು, ಕ್ಷೇತ್ರದಲ್ಲಿ ಹೆಸರು ಗಳಿಸಿದ್ದರು.</p>.<p>ಸ್ವಜಾತಿಯವರೇ ಹೆಚ್ಚಿರುವ ಕ್ಷೇತ್ರ, ಒಂದು ಕಡೆ ತಂದೆಯ ಹೆಸರು, ಮಹಿಳೆ ಎಂಬ ಅಂಶದ ಜತೆಗೆ ಕ್ಷೇತ್ರದಲ್ಲಿನ ಆಡಳಿತ ವಿರೋಧಿ ಅಲೆ ಅವರ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>