<p><strong>ಬೆಂಗಳೂರು: </strong>ಅನುಕಂಪದ ಅಲೆಯಲ್ಲೇ ಚುನಾವಣೆ ಮುನ್ನೆಲೆಗೆ ಬಂದಿದ್ದ ಅಭ್ಯರ್ಥಿಗಳ ಪೈಕಿ, ಕಾಂಗ್ರೆಸ್ನ ಇಬ್ಬರು ಮಾತ್ರ ಗೆಲುವಿನ ನಗೆ ಬೀರಿದ್ದಾರೆ.</p>.<p>ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕ ಖಮರುಲ್ ಇಸ್ಲಾಂ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ, ಆ ಕ್ಷೇತ್ರದಲ್ಲಿ ಅವರ ಪತ್ನಿ ಕನ್ನೀಜ್ ಫಾತಿಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 5,940 ಮತಗಳ ಅಂತರದಿಂದ ಗೆಲವು ಸಾಧಿಸಿದ ಫಾತಿಮಾ, ಕ್ಷೇತ್ರವನ್ನು ಪಕ್ಷದ ತೆಕ್ಕೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಚಿಕ್ಕಮಾದು ಅವರ ಮಗ ಅನಿಲ್, ಎಚ್.ಡಿ.ಕೋಟೆ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವಿಜಯ ಪತಾಕೆ ಹಾರಿಸಿದ್ದಾರೆ.</p>.<p>ಬೇಲೂರಿನ ಮಾಜಿ ಶಾಸಕ ವೈ.ಎನ್.ರುದ್ರೇಶ್ ಗೌಡ, ಇದೇ ಮಾರ್ಚ್ನಲ್ಲಿ ನಿಧನರಾದರು. ಈ ಸಾವಿನ ಅನುಕಂಪದ ಅಲೆಯ ಲಾಭ ಪಡೆಯಲು ಕಾಂಗ್ರೆಸ್, ಅವರ ಪತ್ನಿ ಎಂ.ಎನ್.ಕೀರ್ತನಾ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಅಲ್ಲಿ ಜನತಾದಳದ ಕೆ.ಎಸ್.ಲಿಂಗೇಶ ಕಾಂಗ್ರೆಸ್ನ ಯೋಚನೆ<br /> ಯನ್ನು ಬುಡಮೇಲು ಮಾಡಿದರು.</p>.<p><strong>ದರ್ಶನ್ಗೆ ಸೋಲು:</strong> ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ನಿಧನದ ನಂತರ, ‘ಸ್ವರಾಜ್ ಇಂಡಿಯಾ’ ಪಕ್ಷದ ಉತ್ತರಾಧಿಕಾರಿಯಾಗಿ ಅವರ ಮಗ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.</p>.<p>ಪದವೀಧರರು. ಹೊರದೇಶ ಸುತ್ತಿ ಬಂದವರು. ರೈತಪರ ಕಾಳಜಿ ಉಳ್ಳವರು. ಮೇಲಾಗಿ, ಪುಟ್ಟಣ್ಣಯ್ಯ ಅವರ ಮಗ ಎಂಬ ಕಾರಣಕ್ಕೆ ಸಕ್ಕರೆ ನಾಡಿನಲ್ಲಿ ಅನುಕಂಪದ ಅಲೆ ಎದ್ದಿತ್ತು. ಅವರ ಪರವಾಗಿ ತಮಿಳುನಾಡಿನ ರೈತರು ಸಹ ಪ್ರಚಾರ ಮಾಡಿ, ಕ್ಷೇತ್ರದಲ್ಲಿ ಬದಲಾವಣೆ ತರುವ ಸೂಚನೆ ನೀಡಿದ್ದರು.</p>.<p>ಇದೇ ಅಲೆಯಲ್ಲಿ ಜೆಡಿಎಸ್ನ ಸಿ.ಎಸ್.ಪುಟ್ಟರಾಜು ಅವರಿಗೆ ತೀವ್ರ ಪೈಪೋಟಿ ನೀಡಿದ್ದ ದರ್ಶನ್, ಕೊನೆಗೆ 22,224 ಮತಗಳ ಅಂತರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನುಕಂಪದ ಅಲೆಯಲ್ಲೇ ಚುನಾವಣೆ ಮುನ್ನೆಲೆಗೆ ಬಂದಿದ್ದ ಅಭ್ಯರ್ಥಿಗಳ ಪೈಕಿ, ಕಾಂಗ್ರೆಸ್ನ ಇಬ್ಬರು ಮಾತ್ರ ಗೆಲುವಿನ ನಗೆ ಬೀರಿದ್ದಾರೆ.</p>.<p>ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕ ಖಮರುಲ್ ಇಸ್ಲಾಂ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ, ಆ ಕ್ಷೇತ್ರದಲ್ಲಿ ಅವರ ಪತ್ನಿ ಕನ್ನೀಜ್ ಫಾತಿಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 5,940 ಮತಗಳ ಅಂತರದಿಂದ ಗೆಲವು ಸಾಧಿಸಿದ ಫಾತಿಮಾ, ಕ್ಷೇತ್ರವನ್ನು ಪಕ್ಷದ ತೆಕ್ಕೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಚಿಕ್ಕಮಾದು ಅವರ ಮಗ ಅನಿಲ್, ಎಚ್.ಡಿ.ಕೋಟೆ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವಿಜಯ ಪತಾಕೆ ಹಾರಿಸಿದ್ದಾರೆ.</p>.<p>ಬೇಲೂರಿನ ಮಾಜಿ ಶಾಸಕ ವೈ.ಎನ್.ರುದ್ರೇಶ್ ಗೌಡ, ಇದೇ ಮಾರ್ಚ್ನಲ್ಲಿ ನಿಧನರಾದರು. ಈ ಸಾವಿನ ಅನುಕಂಪದ ಅಲೆಯ ಲಾಭ ಪಡೆಯಲು ಕಾಂಗ್ರೆಸ್, ಅವರ ಪತ್ನಿ ಎಂ.ಎನ್.ಕೀರ್ತನಾ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಅಲ್ಲಿ ಜನತಾದಳದ ಕೆ.ಎಸ್.ಲಿಂಗೇಶ ಕಾಂಗ್ರೆಸ್ನ ಯೋಚನೆ<br /> ಯನ್ನು ಬುಡಮೇಲು ಮಾಡಿದರು.</p>.<p><strong>ದರ್ಶನ್ಗೆ ಸೋಲು:</strong> ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ನಿಧನದ ನಂತರ, ‘ಸ್ವರಾಜ್ ಇಂಡಿಯಾ’ ಪಕ್ಷದ ಉತ್ತರಾಧಿಕಾರಿಯಾಗಿ ಅವರ ಮಗ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.</p>.<p>ಪದವೀಧರರು. ಹೊರದೇಶ ಸುತ್ತಿ ಬಂದವರು. ರೈತಪರ ಕಾಳಜಿ ಉಳ್ಳವರು. ಮೇಲಾಗಿ, ಪುಟ್ಟಣ್ಣಯ್ಯ ಅವರ ಮಗ ಎಂಬ ಕಾರಣಕ್ಕೆ ಸಕ್ಕರೆ ನಾಡಿನಲ್ಲಿ ಅನುಕಂಪದ ಅಲೆ ಎದ್ದಿತ್ತು. ಅವರ ಪರವಾಗಿ ತಮಿಳುನಾಡಿನ ರೈತರು ಸಹ ಪ್ರಚಾರ ಮಾಡಿ, ಕ್ಷೇತ್ರದಲ್ಲಿ ಬದಲಾವಣೆ ತರುವ ಸೂಚನೆ ನೀಡಿದ್ದರು.</p>.<p>ಇದೇ ಅಲೆಯಲ್ಲಿ ಜೆಡಿಎಸ್ನ ಸಿ.ಎಸ್.ಪುಟ್ಟರಾಜು ಅವರಿಗೆ ತೀವ್ರ ಪೈಪೋಟಿ ನೀಡಿದ್ದ ದರ್ಶನ್, ಕೊನೆಗೆ 22,224 ಮತಗಳ ಅಂತರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>