ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆಶಯದಂತೆ ರಾಜ್ಯದಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಪರಿಣಾಮವಾಗಿ ನಮಗೆ ಅತಿ ಹೆಚ್ಚು ಸ್ಥಾನಗಳು ದೊರೆತಿವೆ. ಹೀಗಾಗಿ ನೂರಕ್ಕೆ ನೂರು ನಾವೇ ಸರ್ಕಾರ ರಚಿಸಲಿದ್ದೇವೆ ಎಂದು ಅವರು ಹೇಳಿದರು.
ಈ ಮಧ್ಯೆ, ಕಾಂಗ್ರೆಸ್ನ ಕೆಲವು ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಕೆಲ ಸುದ್ದಿವಾಹಿನಿಗಳು ವರದಿ ಮಾಡಿವೆ.