ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿಜಯೋತ್ಸವ, ಸಂಭ್ರಮ

ಜಿಲ್ಲೆಯಾದ್ಯಂತ ಮೆರವಣಿಗೆ, ಸಿಹಿ ಹಂಚಿ ಸಂತಸ
Last Updated 16 ಮೇ 2018, 8:17 IST
ಅಕ್ಷರ ಗಾತ್ರ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಜಯಗಳಿಸಿದ ಹಿನ್ನೆಲೆಯಲ್ಲಿ ವಿಟ್ಲದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿಟ್ಲದ ಅನಂತಾಡಿ, ಮಂಗಳಪದವು, ಕೇಪು, ಅಳಿಕೆ, ಚಂದಳಿಕೆ ಮೊದಲಾದ ಕಡೆಗಳಿಂದ ಆಗಮಿಸಿದ ನೂರಾರು ಕಾರ್ಯಕರ್ತರು ವಿಟ್ಲದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಶಕ್ತಿ ಕೇಂದ್ರ ಅಧ್ಯಕ್ಷ ರಾಮದಾಸ ಶೆಣೈ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT