<p><strong>ವಿಜಯಪುರ: </strong>ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳ ವಾರ ಪ್ರಕಟಗೊಂಡಿದ್ದು, ಜಿಲ್ಲೆಯ ಮತದಾರರು ಮೂರು ಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿದ್ದರೆ, ದಶಕದ ಬಳಿಕ ಜೆಡಿಎಸ್ ಜಿಲ್ಲೆಯಲ್ಲಿ ಖಾತೆ ತೆರೆದಿದೆ.</p>.<p>ಬಬಲೇಶ್ವರ, ಇಂಡಿ, ಬಸವನ ಬಾಗೇವಾಡಿ ಮತ್ತೊಂದು ಅವಧಿಗೆ ‘ಕೈ’ ವಶವಾದರೆ, ವಿಜಯಪುರ ನಗರ, ದೇವರಹಿಪ್ಪರಗಿ, ಮುದ್ದೇಬಿಹಾಳದಲ್ಲಿ ಮುದುಡಿದ್ದ ತಾವರೆ ಅರಳಿದೆ. ಇದೇ ಮೊದಲ ಬಾರಿಗೆ ಮುದ್ದೇಬಿಹಾಳದಲ್ಲಿ ಕಮಲ ಅರಳಿರುವುದು ಬಿಜೆಪಿ ಪಾಳೆ ಯದ ಸಂತಸಕ್ಕೆ ಪಾರವೇ ಇಲ್ಲವಾಗಿದೆ.</p>.<p>ದಶಕದಿಂದ ಶಾಸಕರನ್ನೇ ಹೊಂದಿರದ ಜೆಡಿಎಸ್ ಈ ಬಾರಿ ನಾಗಠಾಣ ಮೀಸಲು, ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರಲ್ಲಿ ಖುಷಿ ನೂರ್ಮಡಿಗೊಂಡಿದೆ.</p>.<p><strong>ಸಮ್ಮಿಶ್ರ ಸರ್ಕಾರದ ದಿಕ್ಸೂಚಿ:</strong> ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ರಚನೆಯಾ ಗಲಿರುವ ಸಮ್ಮಿಶ್ರ ಸರ್ಕಾರದ ದಿಕ್ಸೂಚಿ ಯಂತಿದೆ. 2004ರ ವಿಧಾನಸಭಾ ಚುನಾವಣೆಯಲ್ಲೂ ಇದೇ ಫಲಿತಾಂಶ ಜಿಲ್ಲೆಯಿಂದ ಹೊರಹೊಮ್ಮಿತ್ತು. ಆಗ ಬಿಜೆಪಿ, ಕಾಂಗ್ರೆಸ್ ತಲಾ ಮೂರು ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದರೆ, ಜೆಡಿಎಸ್, ಪಕ್ಷೇತರರು ತಲಾ ಒಂದು ಕ್ಷೇತ್ರದಲ್ಲಿ ವಿಜಯಿಯಾಗಿದ್ದರು. ಆ ಸಂದರ್ಭವೂ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್, ಜೆಡಿಎಸ್–ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು.</p>.<p>ಪ್ರಸ್ತುತ ಚುನಾವಣಾ ಫಲಿತಾಂಶವೂ ಸಹ 2004ರ ಫಲಿತಾಂಶದ ದಿಕ್ಸೂ ಚಿಯೇ ಆಗಿದೆ. ಈಗಲೂ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳೇ ಹೆಚ್ಚಿವೆ. ಈ ಬಾರಿಯೂ ಬಿಜೆಪಿ, ಕಾಂಗ್ರೆಸ್ ಸಮಬಲ ಸಾಧಿಸಿದ್ದರೆ, ಜೆಡಿಎಸ್ ಮಾತ್ರ ಎರಡು ಕ್ಷೇತ್ರಗಳಲ್ಲಿ ವಿಜಯಿಯಾಗಿದೆ. 2008ರಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಿತ್ತು. ಕಾಂಗ್ರೆಸ್ ಮೂರು ಸ್ಥಾನ ಗಳಿಸಿತ್ತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.</p>.<p>2013ರಲ್ಲಿ ಕಾಂಗ್ರೆಸ್ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ರಾಜ್ಯದಲ್ಲೂ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಬಿಜೆಪಿ ಒಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿತ್ತು. ಇದೀಗ ಪ್ರಕಟಗೊಂಡಿರುವ ಫಲಿತಾಂಶ ಸಹ ರಾಜ್ಯ ಫಲಿತಾಂಶದ ದಿಕ್ಸೂಚಿಯಾಗಿದೆ.</p>.<p>1999ರಲ್ಲಿ ಕಾಂಗ್ರೆಸ್ ಐದು, ಬಿಜೆಪಿ ಎರಡು, ಪಕ್ಷೇತರರು ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.</p>.<p><strong>ದಶಕದ ಬಳಿಕ ಜೆಡಿಎಸ್: </strong>1994ರಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದ ಜೆಡಿಎಸ್, ಜಿಲ್ಲೆಯ ವ್ಯಾಪ್ತಿಯಲ್ಲಿ ಮತ್ತೆ ಖಾತೆ ತೆರೆದಿದ್ದು 2004ರಲ್ಲಿ. ಈ ಎರಡೂ ಅವಧಿ ರಾಜ್ಯದ ಚುಕ್ಕಾಣಿ ಹಿಡಿದಿದ್ದು ವಿಶೇಷ.</p>.<p>2008, 2013ರಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಶಾಸಕರೇ ಇರಲಿಲ್ಲ. ಬಳ್ಳೊಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಆರ್.ಕೆ.ರಾಠೋಡ ಶಾಸಕರಾಗಿ ಆಯ್ಕೆ ಯಾಗಿದ್ದೇ ಕೊನೆಯಾಗಿತ್ತು.</p>.<p>2018ರಲ್ಲಿ ಜೆಡಿಎಸ್ ಮತ್ತೆ ತನ್ನ ಹಳೆಯ ಕ್ಷೇತ್ರಗಳಾದ ಸಿಂದಗಿ, ಆಗಿನ ಬಳ್ಳೊಳ್ಳಿ, ಈಗಿನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ. ರಾಜ್ಯದಲ್ಲಿ ಈ ಬಾರಿಯೂ ಮತ್ತೆ ಅಧಿಕಾರದ ಚುಕ್ಕಾಣಿಯ ಸಮೀಪವಿರುವುದು ಸಹ ವಿಶೇಷವಾಗಿದೆ.</p>.<p><strong>ರಾಷ್ಟ್ರೀಯ ನಾಯಕರ ಪ್ರಚಾರ; ಸೋಲಿನ ಸರಣಿ</strong></p>.<p>ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರ, ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ, ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಿದರೂ, ಎರಡೂ ಕ್ಷೇತ್ರಗಳಲ್ಲಿ ಆಯಾ ಪಕ್ಷಗಳು ಗೆಲುವು ಸಾಧಿಸುವಲ್ಲಿ ವಿಫಲವಾಗಿವೆ.</p>.<p>ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರೂ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರೂ, ಬಿಜೆಪಿ ಗೆಲುವು ಸಾಧಿಸಿಲ್ಲ. ಜಿಲ್ಲೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಇಲ್ಲಿ ಗೆಲುವು ದಾಖಲಿಸಿರುವುದು ಗಮನಾರ್ಹ.</p>.<p>ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಂತಿರುವ, ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಚುನಾವಣಾ ಪ್ರಚಾರ ನಡೆಸಿದರೂ, ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿಲ್ಲ. ವಿಜಯಪುರದಲ್ಲಿ ಬಿಜೆಪಿಯ ಬಾವುಟ ಹಾರಾಡಿದರೆ, ನಾಗಠಾಣದಲ್ಲಿ ಜೆಡಿಎಸ್ ದಶಕದ ಬಳಿಕ ಮತ್ತೆ ಖಾತೆ ತೆರೆದಿದೆ.</p>.<p>ಸೋನಿಯಾಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ನಡೆಸಿದ್ದು ವಿಜಯಪುರದಲ್ಲಿ ಮಾತ್ರ. ಮೋದಿ, ಶಾ ಬಬಲೇಶ್ವರಕ್ಕೆ ಬಂದು ಹೋದರೂ; ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಪರ ಹವಾ ಮತಗಳಾಗಿ ಪರಿವರ್ತನೆಯಾಗಿಲ್ಲ. ಮತದಾರರು ಮೂರು ಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳ ವಾರ ಪ್ರಕಟಗೊಂಡಿದ್ದು, ಜಿಲ್ಲೆಯ ಮತದಾರರು ಮೂರು ಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿದ್ದರೆ, ದಶಕದ ಬಳಿಕ ಜೆಡಿಎಸ್ ಜಿಲ್ಲೆಯಲ್ಲಿ ಖಾತೆ ತೆರೆದಿದೆ.</p>.<p>ಬಬಲೇಶ್ವರ, ಇಂಡಿ, ಬಸವನ ಬಾಗೇವಾಡಿ ಮತ್ತೊಂದು ಅವಧಿಗೆ ‘ಕೈ’ ವಶವಾದರೆ, ವಿಜಯಪುರ ನಗರ, ದೇವರಹಿಪ್ಪರಗಿ, ಮುದ್ದೇಬಿಹಾಳದಲ್ಲಿ ಮುದುಡಿದ್ದ ತಾವರೆ ಅರಳಿದೆ. ಇದೇ ಮೊದಲ ಬಾರಿಗೆ ಮುದ್ದೇಬಿಹಾಳದಲ್ಲಿ ಕಮಲ ಅರಳಿರುವುದು ಬಿಜೆಪಿ ಪಾಳೆ ಯದ ಸಂತಸಕ್ಕೆ ಪಾರವೇ ಇಲ್ಲವಾಗಿದೆ.</p>.<p>ದಶಕದಿಂದ ಶಾಸಕರನ್ನೇ ಹೊಂದಿರದ ಜೆಡಿಎಸ್ ಈ ಬಾರಿ ನಾಗಠಾಣ ಮೀಸಲು, ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರಲ್ಲಿ ಖುಷಿ ನೂರ್ಮಡಿಗೊಂಡಿದೆ.</p>.<p><strong>ಸಮ್ಮಿಶ್ರ ಸರ್ಕಾರದ ದಿಕ್ಸೂಚಿ:</strong> ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ರಚನೆಯಾ ಗಲಿರುವ ಸಮ್ಮಿಶ್ರ ಸರ್ಕಾರದ ದಿಕ್ಸೂಚಿ ಯಂತಿದೆ. 2004ರ ವಿಧಾನಸಭಾ ಚುನಾವಣೆಯಲ್ಲೂ ಇದೇ ಫಲಿತಾಂಶ ಜಿಲ್ಲೆಯಿಂದ ಹೊರಹೊಮ್ಮಿತ್ತು. ಆಗ ಬಿಜೆಪಿ, ಕಾಂಗ್ರೆಸ್ ತಲಾ ಮೂರು ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದರೆ, ಜೆಡಿಎಸ್, ಪಕ್ಷೇತರರು ತಲಾ ಒಂದು ಕ್ಷೇತ್ರದಲ್ಲಿ ವಿಜಯಿಯಾಗಿದ್ದರು. ಆ ಸಂದರ್ಭವೂ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್, ಜೆಡಿಎಸ್–ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು.</p>.<p>ಪ್ರಸ್ತುತ ಚುನಾವಣಾ ಫಲಿತಾಂಶವೂ ಸಹ 2004ರ ಫಲಿತಾಂಶದ ದಿಕ್ಸೂ ಚಿಯೇ ಆಗಿದೆ. ಈಗಲೂ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳೇ ಹೆಚ್ಚಿವೆ. ಈ ಬಾರಿಯೂ ಬಿಜೆಪಿ, ಕಾಂಗ್ರೆಸ್ ಸಮಬಲ ಸಾಧಿಸಿದ್ದರೆ, ಜೆಡಿಎಸ್ ಮಾತ್ರ ಎರಡು ಕ್ಷೇತ್ರಗಳಲ್ಲಿ ವಿಜಯಿಯಾಗಿದೆ. 2008ರಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಿತ್ತು. ಕಾಂಗ್ರೆಸ್ ಮೂರು ಸ್ಥಾನ ಗಳಿಸಿತ್ತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.</p>.<p>2013ರಲ್ಲಿ ಕಾಂಗ್ರೆಸ್ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ರಾಜ್ಯದಲ್ಲೂ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಬಿಜೆಪಿ ಒಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿತ್ತು. ಇದೀಗ ಪ್ರಕಟಗೊಂಡಿರುವ ಫಲಿತಾಂಶ ಸಹ ರಾಜ್ಯ ಫಲಿತಾಂಶದ ದಿಕ್ಸೂಚಿಯಾಗಿದೆ.</p>.<p>1999ರಲ್ಲಿ ಕಾಂಗ್ರೆಸ್ ಐದು, ಬಿಜೆಪಿ ಎರಡು, ಪಕ್ಷೇತರರು ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.</p>.<p><strong>ದಶಕದ ಬಳಿಕ ಜೆಡಿಎಸ್: </strong>1994ರಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದ ಜೆಡಿಎಸ್, ಜಿಲ್ಲೆಯ ವ್ಯಾಪ್ತಿಯಲ್ಲಿ ಮತ್ತೆ ಖಾತೆ ತೆರೆದಿದ್ದು 2004ರಲ್ಲಿ. ಈ ಎರಡೂ ಅವಧಿ ರಾಜ್ಯದ ಚುಕ್ಕಾಣಿ ಹಿಡಿದಿದ್ದು ವಿಶೇಷ.</p>.<p>2008, 2013ರಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಶಾಸಕರೇ ಇರಲಿಲ್ಲ. ಬಳ್ಳೊಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಆರ್.ಕೆ.ರಾಠೋಡ ಶಾಸಕರಾಗಿ ಆಯ್ಕೆ ಯಾಗಿದ್ದೇ ಕೊನೆಯಾಗಿತ್ತು.</p>.<p>2018ರಲ್ಲಿ ಜೆಡಿಎಸ್ ಮತ್ತೆ ತನ್ನ ಹಳೆಯ ಕ್ಷೇತ್ರಗಳಾದ ಸಿಂದಗಿ, ಆಗಿನ ಬಳ್ಳೊಳ್ಳಿ, ಈಗಿನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ. ರಾಜ್ಯದಲ್ಲಿ ಈ ಬಾರಿಯೂ ಮತ್ತೆ ಅಧಿಕಾರದ ಚುಕ್ಕಾಣಿಯ ಸಮೀಪವಿರುವುದು ಸಹ ವಿಶೇಷವಾಗಿದೆ.</p>.<p><strong>ರಾಷ್ಟ್ರೀಯ ನಾಯಕರ ಪ್ರಚಾರ; ಸೋಲಿನ ಸರಣಿ</strong></p>.<p>ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರ, ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ, ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಿದರೂ, ಎರಡೂ ಕ್ಷೇತ್ರಗಳಲ್ಲಿ ಆಯಾ ಪಕ್ಷಗಳು ಗೆಲುವು ಸಾಧಿಸುವಲ್ಲಿ ವಿಫಲವಾಗಿವೆ.</p>.<p>ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರೂ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರೂ, ಬಿಜೆಪಿ ಗೆಲುವು ಸಾಧಿಸಿಲ್ಲ. ಜಿಲ್ಲೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಇಲ್ಲಿ ಗೆಲುವು ದಾಖಲಿಸಿರುವುದು ಗಮನಾರ್ಹ.</p>.<p>ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಂತಿರುವ, ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಚುನಾವಣಾ ಪ್ರಚಾರ ನಡೆಸಿದರೂ, ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿಲ್ಲ. ವಿಜಯಪುರದಲ್ಲಿ ಬಿಜೆಪಿಯ ಬಾವುಟ ಹಾರಾಡಿದರೆ, ನಾಗಠಾಣದಲ್ಲಿ ಜೆಡಿಎಸ್ ದಶಕದ ಬಳಿಕ ಮತ್ತೆ ಖಾತೆ ತೆರೆದಿದೆ.</p>.<p>ಸೋನಿಯಾಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ನಡೆಸಿದ್ದು ವಿಜಯಪುರದಲ್ಲಿ ಮಾತ್ರ. ಮೋದಿ, ಶಾ ಬಬಲೇಶ್ವರಕ್ಕೆ ಬಂದು ಹೋದರೂ; ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಪರ ಹವಾ ಮತಗಳಾಗಿ ಪರಿವರ್ತನೆಯಾಗಿಲ್ಲ. ಮತದಾರರು ಮೂರು ಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>