<p><strong>ರಾಮನಗರ: </strong>ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಪುನರಾಯ್ಕೆ ಆಗಿದ್ದಾರೆ. ಆದರೆ ಹಿಂದೆಂದಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಜಯ ಗಳಿಸಿರುವುದು ಅವರ ಹಿರಿಮೆ.</p>.<p>ಈ ಬಾರಿಯ ಚುನಾವಣೆಯಲ್ಲಿ ಶಿವಕುಮಾರ್ ಬರೋಬ್ಬರಿ 79,909 ಮತಗಳ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಹೆಚ್ಚು ಪೈಪೋಟಿಯೇ ಇಲ್ಲದಂತೆ ಅನಾಯಾಸವಾಗಿ ಗೆದ್ದು ಬಂದಿದ್ದಾರೆ. ಇದು ಕ್ಷೇತ್ರದಲ್ಲಿ ಅವರು ಹೊಂದಿರುವ ಹಿಡಿತವನ್ನು ವಿವರಿಸಿ ಹೇಳುವಂತಿದೆ.</p>.<p>ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕಲು ಜೆಡಿಎಸ್ ಹಾಗೂ ಬಿಜೆಪಿ ಮೀನಮೇಷ ಎಣಿಸಿದ್ದು ಅವರ ಗೆಲುವಿನ ಅಂತರ ಹೆಚ್ಚಳಕ್ಕೆ ಕಾರಣವಾಗಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನಗಳಲ್ಲಿ ಜೆಡಿಎಸ್ ನಾರಾಯಣ ಗೌಡರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತು. ಬಿಜೆಪಿ ನಂದಿನಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿತು. ಆದರೆ ಈ ಎರಡೂ ಪಕ್ಷಗಳ ಅಭ್ಯರ್ಥಿಗಳ ಪರ ಹೆಚ್ಚು ಪ್ರಚಾರ ನಡೆಯಲಿಲ್ಲ.</p>.<p>ಹಲವು ಕೊರತೆಗಳ ನಡುವೆಯೂ ನಾರಾಯಣ ಗೌಡರು ಗಣನೀಯ ಸಂಖ್ಯೆಯಲ್ಲಿ ಮತ ಗಳಿಸಿದ್ದಾರೆ. ಇದು ಕ್ಷೇತ್ರದಲ್ಲಿ ಇನ್ನೂ ಜೆಡಿಎಸ್ ಪರ ಒಲವು ಇರುವುದನ್ನು ಹೇಳುವಂತಿದೆ. ಆದರೆ ಬಿಜೆಪಿ ಇಲ್ಲಿ ಹೆಚ್ಚಿಗೆ ಸಾಧನೆ ಮಾಡಲು ಆಗಿಲ್ಲ.</p>.<p>ನಾಮಪತ್ರ ಸಲ್ಲಿಕೆಯ ಆರಂಭದ ಒಂದು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಶಿವಕುಮಾರ್ ನಂತರದಲ್ಲಿ ಮತದಾನದ ಮುನ್ನ ಕಡೆಯ ಎರಡು ದಿನದಂದು ಮತಯಾಚನೆ ಮಾಡಿದ್ದರು. ಅವರ ಪತ್ನಿ ಉಷಾ ಈ ಬಾರಿ ನಗರದಲ್ಲಿ ಸಕ್ರಿಯವಾಗಿ ಪತಿ ಪರ ಪ್ರಚಾರ ಮಾಡಿದ್ದರು.</p>.<p><strong>ಏಳನೇ ಬಾರಿ: </strong>ಶಿವಕುಮಾರ್ಗೆ ಇದು ಒಟ್ಟು ಎಂಟನೇ ವಿಧಾನಸಭೆ ಚುನಾವಣೆ. ಏಳನೇ ಗೆಲುವು. 1985ರಲ್ಲಿ ಸಾತನೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅವರು 1989ರಿಂದ 2004ರವರೆಗೆ ಸಾತನೂರು ಕ್ಷೇತ್ರವನ್ನು ಹಾಗೂ 2008ರಿಂದ ಕನಕಪುರ ಕ್ಷೇತ್ರವನ್ನು ಶಾಸಕರಾಗಿ ಪ್ರತಿನಿಧಿಸುತ್ತಾ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಪುನರಾಯ್ಕೆ ಆಗಿದ್ದಾರೆ. ಆದರೆ ಹಿಂದೆಂದಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಜಯ ಗಳಿಸಿರುವುದು ಅವರ ಹಿರಿಮೆ.</p>.<p>ಈ ಬಾರಿಯ ಚುನಾವಣೆಯಲ್ಲಿ ಶಿವಕುಮಾರ್ ಬರೋಬ್ಬರಿ 79,909 ಮತಗಳ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಹೆಚ್ಚು ಪೈಪೋಟಿಯೇ ಇಲ್ಲದಂತೆ ಅನಾಯಾಸವಾಗಿ ಗೆದ್ದು ಬಂದಿದ್ದಾರೆ. ಇದು ಕ್ಷೇತ್ರದಲ್ಲಿ ಅವರು ಹೊಂದಿರುವ ಹಿಡಿತವನ್ನು ವಿವರಿಸಿ ಹೇಳುವಂತಿದೆ.</p>.<p>ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕಲು ಜೆಡಿಎಸ್ ಹಾಗೂ ಬಿಜೆಪಿ ಮೀನಮೇಷ ಎಣಿಸಿದ್ದು ಅವರ ಗೆಲುವಿನ ಅಂತರ ಹೆಚ್ಚಳಕ್ಕೆ ಕಾರಣವಾಗಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನಗಳಲ್ಲಿ ಜೆಡಿಎಸ್ ನಾರಾಯಣ ಗೌಡರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತು. ಬಿಜೆಪಿ ನಂದಿನಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿತು. ಆದರೆ ಈ ಎರಡೂ ಪಕ್ಷಗಳ ಅಭ್ಯರ್ಥಿಗಳ ಪರ ಹೆಚ್ಚು ಪ್ರಚಾರ ನಡೆಯಲಿಲ್ಲ.</p>.<p>ಹಲವು ಕೊರತೆಗಳ ನಡುವೆಯೂ ನಾರಾಯಣ ಗೌಡರು ಗಣನೀಯ ಸಂಖ್ಯೆಯಲ್ಲಿ ಮತ ಗಳಿಸಿದ್ದಾರೆ. ಇದು ಕ್ಷೇತ್ರದಲ್ಲಿ ಇನ್ನೂ ಜೆಡಿಎಸ್ ಪರ ಒಲವು ಇರುವುದನ್ನು ಹೇಳುವಂತಿದೆ. ಆದರೆ ಬಿಜೆಪಿ ಇಲ್ಲಿ ಹೆಚ್ಚಿಗೆ ಸಾಧನೆ ಮಾಡಲು ಆಗಿಲ್ಲ.</p>.<p>ನಾಮಪತ್ರ ಸಲ್ಲಿಕೆಯ ಆರಂಭದ ಒಂದು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಶಿವಕುಮಾರ್ ನಂತರದಲ್ಲಿ ಮತದಾನದ ಮುನ್ನ ಕಡೆಯ ಎರಡು ದಿನದಂದು ಮತಯಾಚನೆ ಮಾಡಿದ್ದರು. ಅವರ ಪತ್ನಿ ಉಷಾ ಈ ಬಾರಿ ನಗರದಲ್ಲಿ ಸಕ್ರಿಯವಾಗಿ ಪತಿ ಪರ ಪ್ರಚಾರ ಮಾಡಿದ್ದರು.</p>.<p><strong>ಏಳನೇ ಬಾರಿ: </strong>ಶಿವಕುಮಾರ್ಗೆ ಇದು ಒಟ್ಟು ಎಂಟನೇ ವಿಧಾನಸಭೆ ಚುನಾವಣೆ. ಏಳನೇ ಗೆಲುವು. 1985ರಲ್ಲಿ ಸಾತನೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅವರು 1989ರಿಂದ 2004ರವರೆಗೆ ಸಾತನೂರು ಕ್ಷೇತ್ರವನ್ನು ಹಾಗೂ 2008ರಿಂದ ಕನಕಪುರ ಕ್ಷೇತ್ರವನ್ನು ಶಾಸಕರಾಗಿ ಪ್ರತಿನಿಧಿಸುತ್ತಾ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>