ಡಿ.ಸಿ.ತಮ್ಮಣ್ಣ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಪಾರ ಅನುಭವಉಳ್ಳವರಾಗಿದ್ದು ಅವರೇ ಸಚಿವರಾಗುತ್ತಾರೆ. ಜೊತೆಗೆ ತಮ್ಮಣ್ಣ ಅವರು ಎಚ್.ಡಿ.ದೇವೇಗೌಡರ ಬೀಗರೂ ಆಗಿರುವ ಕಾರಣ ಬೀಗತನ ಸರ್ಕಾರ ರಚನೆಯಲ್ಲಿ ಪ್ರಮುಖವಾಗುತ್ತದೆ ಎಂಬ ಅಭಿಪ್ರಾಯ ಜಿಲ್ಲೆಯಲ್ಲಿ ಇದೆ. ಸಿ.ಎಸ್.ಪುಟ್ಟರಾಜು ಅವರು ಎಚ್.ಡಿ.ದೇವೇಗೌಡ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಜೊತೆಗೆ ಅವರು ಜೆಡಿಎಸ್ನಲ್ಲಿ ಜಿಲ್ಲಾ ನಾಯಕರಾಗಿದ್ದಾರೆ. ಈ ಕಾರಣದಿಂದ ಅವರಿಗೆ ಸಚಿವಸ್ಥಾನ ಸಿಗಬಹುದು ಎಂಬ ಚರ್ಚೆಯೂ ನಡೆದಿದೆ.