ಬಿಜೆಪಿಯು ಹಿಂದಿನ ಬಾರಿಗಿಂತಲೂ ಈ ಬಾರಿ ಒಂದು ಹೆಚ್ಚು ಸ್ಥಾನ ಗಳಿಸಿ ಮೂರರ ಬಲದಲ್ಲಿದೆ. ಜಿಲ್ಲೆಯಲ್ಲಿ ಜಿ.ಸೋಮಶೇಖರ ರೆಡ್ಡಿ ಮತ್ತು ಸೋಮಲಿಂಗಪ್ಪ ತಮ್ಮ ವೈಯಕ್ತಿಕ ವರ್ಚಸ್ಸಿನಿಂದಲೇ ಗೆಲುವು ತಂದಿದ್ದಾರೆ. ಮೊಳಕಾಲ್ಮುರಿನಲ್ಲಿ ಕಾಂಗ್ರೆಸ್ ಟಿಕೆಟ್ ದೊರಕದ ಕಾರಣಕ್ಕೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದ ಎನ್.ವೈ.ಗೋಪಾಲಕೃಷ್ಣ ಅಚ್ಚರಿ ಎಂಬಂತೆ ಗೆದ್ದಿದ್ದಾರೆ.