ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಮಗೆ ಸಂಖ್ಯಾಬಲ ಇದೆ. ಆದರೆ, ಬಿಜೆಪಿಗೆ ಸಂಖ್ಯಾಬಲದ ಶಾಸಕರ ಕೊರತೆ ಇದೆ. ಸುಪ್ರೀಂ ಕೋರ್ಟ್ ಆದೇಶದಲ್ಲೂ ಸ್ಪಷ್ಟವಾಗಿ ಹೇಳಲಾಗಿದೆ. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಎರಡು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಬಹುದು. ಹೀಗಾಗಿ ಸಮಯ ವ್ಯರ್ಥ ಮಾಡದೇ ಸರ್ಕಾರ ರಚನೆಗೆ ಅವಕಾಶ ಕೊಡಬೇಕು. ಕುದರೆ ವ್ಯಾಪಾರ ನಡೆಯಲು ಬಿಡಬಾರದು ಎಂದು ಅವರು ಒತ್ತಾಯಿಸಿದರು.