ಚಿಕ್ಕಬಳ್ಳಾಪುರ: ‘ತಾಲ್ಲೂಕಿನ ಮಾರ್ಗಾನಹಳ್ಳಿ ಮತ್ತು ದೊಡ್ಡಪೈಲಗುರ್ಕಿ ಪಂಚಾಯಿತಿ ವ್ಯಾಪ್ತಿಯ ಇನಮಿಂಚೇನಹಳ್ಳಿಯಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವದ ನೆವದಲ್ಲಿ ಉದ್ದೇಶಪೂರ್ವಕವಾಗಿ ಜೆಡಿಎಸ್ ಮುಖಂಡರ ಮನೆ ಎದುರು ಪಟಾಕಿ ಸಿಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಅಧಿಕಾರಿಗಳು ತಮ್ಮ ಬಟ್ಟೆ ಹರಿದು ಥಳಿಸಿದ್ದಾರೆ’ ಎಂದು ಜೆಡಿಎಸ್ ಮುಖಂಡ, ಹಿರಿಯ ವಕೀಲ ನಾರಾಯಣಸ್ವಾಮಿ ಆರೋಪಿಸಿದರು.