ಏಳು ಕೋಟಿ ಹೆಕ್ಟೇರ್ನಷ್ಟು ಕೃಷಿ ಭೂಮಿಗೆ ನೀರಾವರಿಯನ್ನು ವಿಸ್ತರಿಸುವ ಉದ್ದೇಶದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಈ ನಿಧಿಯನ್ನು ಸ್ಥಾಪಿಸಲಾಗುತ್ತದೆ. 2018–19ನೇ ಸಾಲಿನಲ್ಲಿ ₹ 2,000 ಕೋಟಿಯನ್ನು ಮಂಜೂರು ಮಾಡಲಾಗುತ್ತದೆ. 2019–20ನೇ ಸಾಲಿನಲ್ಲಿ ₹ 3,000 ಕೋಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಮಿತಿಯು ತಿಳಿಸಿದೆ.