‘ಕಳೆದ ಚುನಾವಣೆಯಲ್ಲಿ ಬಿಜೆಪಿ, ಕೆಜೆಪಿ ಅಭ್ಯರ್ಥಿಗಳು ಗಳಿಸಿದ್ದ ಮತಗಳು ಈ ಚುನಾವಣೆಯಲ್ಲೂ ಪಕ್ಷಕ್ಕೆ ಬಂದಿವೆ. ಆದರೆ, ಕರ್ಕಿ ಬಸವೇಶ್ವರ ನಗರ, ಮಂಟೂರು ರೋಡ್, ಕುಲಕರ್ಣಿ ಓಣಿ ಪ್ರದೇಶದಲ್ಲಿರುವ ಪಕ್ಷದ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿಲ್ಲ. ಚುನಾವಣೆ ಸಂದರ್ಭದಲ್ಲಿ ನಡೆದ ಈ ಎಲ್ಲ ಬೆಳವಣಿಗೆಗಳು ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಅದನ್ನು ಅವರು ವಿಮರ್ಶೆ ಮಾಡುತ್ತಿದ್ದಾರೆ. ಸೂಕ್ತ ಕ್ರಮಕೈಗೊಳ್ಳಲಿದ್ದಾರೆ’ ಎಂದರು.