ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಆಡಳಿತ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅಡಿಗಲ್ಲು ಹಾಕಿದ್ದು, ಅವು ಪ್ರಗತಿಯಲ್ಲಿವೆ. ಕಳಪೆ ಗುಣಮಟ್ಟದ ಕಾಮಗಾರಿ ಕಂಡು ಬಂದಲ್ಲಿ ಸಹಿಸುವುದಿಲ್ಲ. ಅದಕ್ಕೆ ಮೀಸಲಿಟ್ಟ ಹಣ ಸಂಪೂರ್ಣ ಖರ್ಚಾಗಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ಕೊಡುವುದಿಲ್ಲ’ ಎಂದು ಎಚ್ಚರಿಸಿದರು.