<p><strong>ತೋರಣಗಲ್ಲು:</strong> ಸಮೀಪದ ವೇಣಿವೀರಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.</p>.<p>ಈ ಗ್ರಾಮ ಮೊದಲು ಕುಡಿತಿನಿ ಗ್ರಾಮ ಪಂಚಾಯಿತಿಗೆ ಸೇರಿತ್ತು.ಆದರೆ ಅದು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಗ್ರಾಮ ಯಾವ ಪಂಚಾಯಿತಿಯ ವ್ಯಾಪ್ತಿಗೂ ಸೇರಿಲ್ಲ. ಹೀಗಾಗಿ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಯಾರಿಗೆ ದೂರು ಅರ್ಜಿ ಕೊಡಬೇಕು ಎಂಬುದೂ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಎರಡು ಸಾವಿರ ಜನಸಂಖ್ಯೆಯುಳ್ಳ ಗ್ರಾಮದ ಸಮೀಪದಲ್ಲೇ ಎಚ್.ಎಲ್.ಸಿ. ಕಾಲುವೆ ಹಾದು ಹೋಗಿದ್ದರೂ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಇಲ್ಲ.</p>.<p>ಗ್ರಾಮದಲ್ಲಿ ಮೂರು ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದ ಶುದ್ಧ ನೀರಿನ ಘಟಕ ಆರು ತಿಂಗಳಿಂದ ಕೆಟ್ಟಿದೆ. ಕುಡಿಯುವ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ದುರಸ್ತಿ ಕಾರ್ಯ ಮಾತ್ರ ನಡೆದಿಲ್ಲ.</p>.<p><strong>ಅಲೆದಾಟ: </strong>ಗ್ರಾಮಸ್ಥರು ನೀರಿಗಾಗಿ 6 ಕಿ.ಮೀ. ದೂರದಲ್ಲಿರುವ ಕುಡಿತಿನಿಗೆ ಬೈಕ್ ಮತ್ತು ಬೈಸಿಕಲ್ಗಳಲ್ಲಿ ತೆರಳಿ ಅಲ್ಲಿನ ಖಾಸಗಿ ನೀರಿನ ಘಟಕದಿಂದ ಪ್ರತಿ ಕೊಡಕ್ಕೆ ₹ 10 ನೀಡಿ ನೀರು ಖರೀದಿಸಿ ತರುತ್ತಿದ್ದಾರೆ. ತೋರಣಗಲ್ಲಿನಿಂದ ಗ್ರಾಮಕ್ಕೆ ಕೆಲವುದಿನ ಖಾಸಗಿ ಶುದ್ಧ ಕುಡಿಯುವ ನೀರಿನ ಟ್ಯಾಂಕರ್ ಬರುತ್ತಿರುವುದರಿಂದ ಸನ್ನಿವೇಶ ಬಿಗಡಾಯಿಸಿಲ್ಲ.</p>.<p>‘ಈ ಹಿಂದೆ ಎಷ್ಟೋ ಬಾರಿ ಗ್ರಾಮಕ್ಕೆ ನೀರು ಪೂರೈಸುವ ನೀರಿನ ಪಂಪ್ ಸುಟ್ಟಿತ್ತು. ಅದನ್ನು ನಮ್ಮ ಹಣದಿಂದಲೇ ದುರಸ್ತಿ ಮಾಡಿಸಿದೆವು. ಹಲವು ಬಾರಿ ಜಿಲ್ಲಾ ಪಂಚಾಯಿತಿ ಮನವಿ ಸಲ್ಲಿಸಿದ್ದರೂ ಪ್ರಯೋಜವಾಗಿಲ್ಲ’ ಎಂದು ಗ್ರಾಮದ ದಸಂಸ ಗ್ರಾಮ ಘಟಕದ ಅಧ್ಯಕ್ಷ ಶಿವುಕುಮಾರ ತಿಳಿಸಿದರು.</p>.<p>‘ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ರಾಮಪ್ರಸಾದ್ ಮನೋಹರ್ ಭೇಟಿ ಕೊಟ್ಟು ಸಮಸ್ಯೆಯನ್ನು ಆಲಿಸಿದ್ದರು. ಇಲ್ಲಿವರೆಗೂ ಸ್ಪಂದಿಸಿಲ್ಲ’ ಎಂದು ವಿಷಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು:</strong> ಸಮೀಪದ ವೇಣಿವೀರಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.</p>.<p>ಈ ಗ್ರಾಮ ಮೊದಲು ಕುಡಿತಿನಿ ಗ್ರಾಮ ಪಂಚಾಯಿತಿಗೆ ಸೇರಿತ್ತು.ಆದರೆ ಅದು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಗ್ರಾಮ ಯಾವ ಪಂಚಾಯಿತಿಯ ವ್ಯಾಪ್ತಿಗೂ ಸೇರಿಲ್ಲ. ಹೀಗಾಗಿ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಯಾರಿಗೆ ದೂರು ಅರ್ಜಿ ಕೊಡಬೇಕು ಎಂಬುದೂ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಎರಡು ಸಾವಿರ ಜನಸಂಖ್ಯೆಯುಳ್ಳ ಗ್ರಾಮದ ಸಮೀಪದಲ್ಲೇ ಎಚ್.ಎಲ್.ಸಿ. ಕಾಲುವೆ ಹಾದು ಹೋಗಿದ್ದರೂ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಇಲ್ಲ.</p>.<p>ಗ್ರಾಮದಲ್ಲಿ ಮೂರು ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದ ಶುದ್ಧ ನೀರಿನ ಘಟಕ ಆರು ತಿಂಗಳಿಂದ ಕೆಟ್ಟಿದೆ. ಕುಡಿಯುವ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ದುರಸ್ತಿ ಕಾರ್ಯ ಮಾತ್ರ ನಡೆದಿಲ್ಲ.</p>.<p><strong>ಅಲೆದಾಟ: </strong>ಗ್ರಾಮಸ್ಥರು ನೀರಿಗಾಗಿ 6 ಕಿ.ಮೀ. ದೂರದಲ್ಲಿರುವ ಕುಡಿತಿನಿಗೆ ಬೈಕ್ ಮತ್ತು ಬೈಸಿಕಲ್ಗಳಲ್ಲಿ ತೆರಳಿ ಅಲ್ಲಿನ ಖಾಸಗಿ ನೀರಿನ ಘಟಕದಿಂದ ಪ್ರತಿ ಕೊಡಕ್ಕೆ ₹ 10 ನೀಡಿ ನೀರು ಖರೀದಿಸಿ ತರುತ್ತಿದ್ದಾರೆ. ತೋರಣಗಲ್ಲಿನಿಂದ ಗ್ರಾಮಕ್ಕೆ ಕೆಲವುದಿನ ಖಾಸಗಿ ಶುದ್ಧ ಕುಡಿಯುವ ನೀರಿನ ಟ್ಯಾಂಕರ್ ಬರುತ್ತಿರುವುದರಿಂದ ಸನ್ನಿವೇಶ ಬಿಗಡಾಯಿಸಿಲ್ಲ.</p>.<p>‘ಈ ಹಿಂದೆ ಎಷ್ಟೋ ಬಾರಿ ಗ್ರಾಮಕ್ಕೆ ನೀರು ಪೂರೈಸುವ ನೀರಿನ ಪಂಪ್ ಸುಟ್ಟಿತ್ತು. ಅದನ್ನು ನಮ್ಮ ಹಣದಿಂದಲೇ ದುರಸ್ತಿ ಮಾಡಿಸಿದೆವು. ಹಲವು ಬಾರಿ ಜಿಲ್ಲಾ ಪಂಚಾಯಿತಿ ಮನವಿ ಸಲ್ಲಿಸಿದ್ದರೂ ಪ್ರಯೋಜವಾಗಿಲ್ಲ’ ಎಂದು ಗ್ರಾಮದ ದಸಂಸ ಗ್ರಾಮ ಘಟಕದ ಅಧ್ಯಕ್ಷ ಶಿವುಕುಮಾರ ತಿಳಿಸಿದರು.</p>.<p>‘ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ರಾಮಪ್ರಸಾದ್ ಮನೋಹರ್ ಭೇಟಿ ಕೊಟ್ಟು ಸಮಸ್ಯೆಯನ್ನು ಆಲಿಸಿದ್ದರು. ಇಲ್ಲಿವರೆಗೂ ಸ್ಪಂದಿಸಿಲ್ಲ’ ಎಂದು ವಿಷಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>