ಇದನ್ನು ವಿರೋಧಿಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್, ‘117 ಶಾಸಕರ ಬೆಂಬಲವಿದ್ದರೂ ರಾಜ್ಯಪಾಲರು ಜೆಡಿಎಸ್–ಕಾಂಗ್ರೆಸ್ ಕಡೆಗಣಿಸಿ 104 ಶಾಸಕರನ್ನು ಹೊಂದಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ. ಜತೆಗೆ ಬಹುಮತ ಸಾಬೀತುಪಡಿಸಲು ಸುದೀರ್ಘ 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಹೀಗಾಗಿ, ರಾಜ್ಯಪಾಲರ ನಿರ್ಧಾರವನ್ನು ರದ್ದುಪಡಿಸಿ ಸರ್ಕಾರ ರಚಿಸಲು ಜೆಡಿಎಸ್–ಕಾಂಗ್ರೆಸ್ಗೆ ಆಹ್ವಾನ ನೀಡಬೇಕು’ ಎಂದು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿದ್ದರು.