ಬಿ.ಎಸ್.ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಲ್ಲಿ ಧರಣಿ ಕುಳಿತರು. ಗೋವಾದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ಭೇಟಿಗೆ ಸಜ್ಜಾಗಿದ್ದರೆ, ಮತ್ತೊಂದು ಕಡೆ ಬಿಹಾರದಲ್ಲಿ ಆರ್ಜೆಡಿ ಕೂಡ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಲಿದೆ.