ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತಾಶ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕೊಲೆ : ಅಮಿತ್ ಶಾ

Last Updated 17 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ : ಹತಾಶ ಕಾಂಗ್ರೆಸ್ ‘ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ’ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಸರ್ಕಾರ ರಚಿಸಲು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಹ್ವಾನ ನೀಡಿದ್ದು ಪ್ರಜಾಪ್ರಭುತ್ವದ ಕೊಲೆ ಎಂದು ಕಾಂಗ್ರೆಸ್ ಬುಧವಾರ ಟೀಕಿಸಿತ್ತು.

‘ಕರ್ನಾಟಕದಲ್ಲಿ ಸರ್ಕಾರ ರಚಿಸಲು ಜನಾದೇಶ ಪಡೆದವರು 104 ಸ್ಥಾನ ಗಳಿಸಿದ ಬಿಜೆಪಿಯೇ ಅಥವಾ ಭಾರಿ ಅಂತರದಿಂದ ಸೋಲನುಭವಿಸಿದ ಮುಖ್ಯಮಂತ್ರಿ ಹಾಗೂ 78 ಸ್ಥಾನಗಳಿಗೆ ಇಳಿಕೆ ಕಂಡ ಕಾಂಗ್ರೆಸ್‌ ಪಕ್ಷವೇ? ಕೇವಲ 38 ಸ್ಥಾನ ಗಳಿಸಿದ ಜೆಡಿಎಸ್ ಹಲವು ಕಡೆಗಳಲ್ಲಿ ಠೇವಣಿ ಕಳೆದುಕೊಂಡಿದೆ. ಜನರು ಬುದ್ಧಿವಂತರಿದ್ದಾರೆ. ಅವರಿಗೆ ವಾಸ್ತವ ಅರಿವಾಗುತ್ತದೆ’ ಎಂದು ಶಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT