ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ: ಸಿಡಿಲಿಗೆ ಯುವಕ ಬಲಿ

Last Updated 17 ಮೇ 2018, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ಗದಗ– ಬೆಟಗೇರಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ.

ಗದಗ ಜಿಲ್ಲೆಯ ರೋಣದಲ್ಲಿ ಕುರಿ ಕಾಯುತ್ತಿದ್ದ ಸೋಮಶೇಖರ ಈರಪ್ಪ ಕೊಳ್ಳಿ (23) ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.

ಗದಗ ನಗರದಲ್ಲಿರುವ ಕೆಲವು ಡಬ್ಬಿ ಅಂಗಡಿಗಳ ತಗಡಿನ ಶೀಟ್‌ ಹಾರಿಹೋಗಿವೆ.

ಜಿಲ್ಲೆಯಲ್ಲಿ 13 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಜತೆಗೆ 8ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಬೀದರ್‌ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಬಡಿದ ಸಿಡಿಲಿಗೆ ಹಸು ಬಲಿಯಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಕವಿತಾಳದಲ್ಲೂ ಭಾರಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT