ಬೆಂಗಳೂರು: ರಾಜ್ಯ ರಾಜಕಾರಣ ಗಂಟೆಗೊಂದು ತಿರುವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಬಿಜೆಪಿ ಆಮಿಷಗಳಿಂದ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಡ್, ಹೋಟೆಲ್ ಮೊರೆ ಹೋಗಿದ್ದಾರೆ. ಗುರುವಾರ ತಡರಾತ್ರಿ ಕೊಚ್ಚಿಗೆ ಹೋಗುವುದಾಗಿ ಸುದ್ದಿ ಹರಿಬಿಟ್ಟಿದ್ದ ಮುಖಂಡರು ಹೆದ್ದಾರಿಯಲ್ಲಿ ಬಸ್ ಬದಲಾಯಿಸಿ ಹೈದರಾಬಾದ್ಗೆ ತೆರಳಿದ್ದಾರೆ.