ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಮತ ಸಾಬೀತುಪಡಿಸುತ್ತೇವೆ –ಬಿಜೆಪಿ; ಸಿಎಂ ಬಿಎಸ್‌ವೈಗೆ ಒಂದು ದಿನ ಬಾಕಿಯಿದೆ –ಕಾಂಗ್ರೆಸ್‌

Last Updated 18 ಮೇ 2018, 12:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸಲು ಶನಿವಾರ ಸಂಜೆ 4 ಗಂಟೆಗೆ ಸಮಯ ನಿಗದಿಯಾದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ’ಬಹುಮತ’ದ ಚರ್ಚೆಗಳು ಬಿರುಸು ಪಡೆದಿವೆ.

ಪ್ರಮಾಣ ವಚನಕ್ಕೆ ತಡೆ ಕೋರಿ ಕಾಂಗ್ರೆಸ್–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ, ನಾಳೆ(ಶನಿವಾರ) ಸಂಜೆ 4ಕ್ಕೆ ವಿಶ್ವಾಸಮತ ಸಾಬೀತುಪಡಿಸುವಂತೆ ಆದೇಶಿಸಿದೆ.

ಬಹುಮತ ಸಾಬೀತುಪಡಿಸಲು ಹಾಗೂ ಉಳಿಸಿಕೊಳ್ಳಲು ಕಸರತ್ತು ಮುಂದುವರಿಸಿರುವ ಮೂರೂ ಪಕ್ಷಗಳು ಮೇಲ್ನೋಟಕ್ಕೆ ಕೋರ್ಟ್‌ ಆದೇಶವನ್ನು ಸ್ವಾಗತಿಸಿವೆ. ಜೊತೆಗೆ ಟ್ವಿಟರ್‌ನಲ್ಲಿ ಪರಸ್ಪರ ಟೀಕೆಗಳನ್ನು ಮುಂದುವರಿಸಿವೆ.

ಸುಪ್ರೀಂಕೋರ್ಟ್‌ ಆದೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಮುಖಂಡ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ, ‘ಸಂವಿಧಾನ ಗೆದ್ದಿದೆ. ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಿದೆ. ಮುಖ್ಯಮಂತ್ರಿ ಯಡಿಯುರಪ್ಪನವರಿಗೆ ಒಂದು ದಿನ ಉಳಿದಿದೆ. ರಾಜ್ಯಪಾಲರ ಅಸಂವಿಧಾನಿಕ ನಿರ್ಧಾರ ಹಾಗೂ ನ್ಯಾಯಸಮ್ಮತವಲ್ಲದ ಮುಖ್ಯಮಂತ್ರಿಯನ್ನು ಸಂವಿಧಾನ ತಿರಸ್ಕರಿಸುತ್ತದೆ.' ಎಂದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT