ಬಹುಮತ ಸಿಗದೇ ಇದ್ದರೆ ಸಮಯ ವ್ಯರ್ಥ ಮಾಡದೆ ಜೆಡಿಎಸ್ ಜತೆ ಕೈ ಜೋಡಿಸಿ ಅಧಿಕಾರಕ್ಕೇರುವ ಬಗ್ಗೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಸೋನಿಯಾಗಾಂಧಿ, ರಾಹುಲ್, ಪ್ರಿಯಾಂಕಾ, ಅಹಮದ್ ಪಟೇಲ್ ಭಾಗಿಯಾಗಿದ್ದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಸೋನಿಯಾ, ಪ್ರಿಯಾಂಕಾ, ಗುಲಾಂ ನಬೀ ಆಜಾದ್, ಅಶೋಕ್ ಗೆಲ್ಹೋಟ್ ಮೊದಲಾದ ಕಾಂಗ್ರೆಸ್ ನಾಯಕರು ಸೇರಿದಂತೆ ಟಿಡಿಪಿ,ಟಿಆರ್ಎಸ್,ಬಿಎಸ್ಪಿ, ತೃಣಮೂಲ ಕಾಂಗ್ರೆಸ್, ಸಿಪಿಎಂ ಪಕ್ಷಗಳ ನಾಯಕರು ಕೂಡಾ ಬಿಜೆಪಿ ವಿರುದ್ಧದ ತಂತ್ರಗಾರಿಕೆಯಲ್ಲಿ ಭಾಗಿಯಾಗಿದ್ದರು.