ವಿಶ್ವ ಬ್ಯಾಂಕ್ ನೆರವಿನ ಜಲ ನಿರ್ಮಲ ಯೋಜನೆಯ ಅಡಿಯಲ್ಲಿ ಚಿಮ್ಮನಚೋಡ್ ಬಳಿ ಮುಲ್ಲಾಮಾರಿ ನದಿಯಲ್ಲಿ ಜಾಕ್ವೆಲ್ ನಿರ್ಮಿಸಿ ಅಲ್ಲಿಂದ ಕೊಳವೆ ಮೂಲಕ ಪಸ್ತಪುರ ಗ್ರಾಮಕ್ಕೆ ನೀರು ಪೂರೈಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಿ 5 ವರ್ಷ ಗತಿಸಿದರೂ ಯೋಜನೆಯಿಂದ ನೀರು ನೀಡಲು ಸಾಧ್ಯವಾಗಿಲ್ಲ. ಪಸ್ತಪುರ ತಾಂಡಾಕ್ಕೆ ಬಹುಗ್ರಾಮ ಕುಡಿವ ನೀರಿನ ಯೋಜನೆ ರೂಪಿಸಿ ₹5 ಕೋಟಿ ಖರ್ಚು ಮಾಡಿದ್ದಾರೆ. ಆದರೆ ತಾಂಡಾಕ್ಕೆ ನೀರು ಬರುತ್ತಿಲ್ಲ ಎಂಬುದು ಸ್ಥಳೀಯರ ಅಳಲಾಗಿದೆ.