ಗ್ರಾಮದಲ್ಲಿ ಬಸ್ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಶುಕ್ರವಾರ ಮಧ್ಯಾಹ್ನ ಸತೀಶನ ಶವ ಕಂಡ ಕೆಲವರು, ಪೋಷಕರಿಗೆ ತಿಳಿಸಿದ್ದಾರೆ. ನಂತರ ಗ್ರಾಮದಲ್ಲಿ ಸುದ್ದಿ ಹರಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಬಾಲಕನ ಮನೆಯವರಿಂದ ಹೇಳಿಕೆ ಪಡೆದುಕೊಂಡು, ಪ್ರಕ ರಣ ದಾಖಲಿಸಿಕೊಂಡರು. ಬಾಲಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುನಗುಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.