ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತಂಕ ಸೃಷ್ಟಿಸಿದ ಹೊಗೆ

Last Updated 19 ಮೇ 2018, 12:07 IST
ಅಕ್ಷರ ಗಾತ್ರ

ಕಾರವಾರ: ಇಲ್ಲಿನ ಬೈತಖೋಲ್‌ನ ಅಲೆ ತಡೆಗೋಡೆ ಇರುವ ಪ್ರದೇಶದಲ್ಲಿ ಕಿಡಿಗೇಡಿಗಳು ಫೈಬರ್‌ ವಸ್ತುಗಳಿಗೆ ಶುಕ್ರವಾರ ಹಾಕಿದ್ದ ಬೆಂಕಿಯಿಂದಾಗಿ ಸ್ಥಳೀಯರು ಕೆಲಕಾಲ ಆತಂಕಗೊಂಡರು.

‘ಸ್ಥಳೀಯರು ಇಲ್ಲಿ ಕಸ ಸುರಿಯುತ್ತಾರೆ. ಅವರಿಗೆ ಇಲ್ಲಿ ಕಸ ಸುರಿಯದಂತೆ ಹೇಳಿದರೂ ಅದನ್ನೇ ಮುಂದುವರಿಸುತ್ತಿದ್ದಾರೆ. ಬೆಳಿಗ್ಗೆ ಹೊತ್ತು ಇಲ್ಲಿ ಕಪ್ಪು ಹೊಗೆಯು ದಟ್ಟಾವಾಗಿ ಆವರಿಸಿಕೊಂಡಿತ್ತು. ಗಾಬರಿಗೊಂಡು ಪರಿಶೀಲಿಸಿದಾಗ ಕಸ ಸುರಿದು, ಫೈಬರ್ ವಸ್ತುಗಳಿಗೆ ಯಾರೊ ಬೆಂಕಿ ಹಚ್ಚಿದ್ದರು’ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಂದರು ಅಧಿಕಾರಿಗಳು ತಿಳಿಸಿದರು.

ಸ್ಥಳೀಯರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT