<p><strong>ನವದೆಹಲಿ:</strong> ‘ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕಿಂತ ದೊಡ್ಡವರಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕರ್ನಾಟಕ ರವಾನಿಸಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಬಿಜೆಪಿ ಮತ್ತು ಆರ್ಎಸ್ಎಸ್ಗೂ ಇದೊಂದು ಬಹು ದೊಡ್ಡ ಪಾಠಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದ್ದಾರೆ.</p>.<p>ರಾಷ್ಟ್ರಗೀತೆಯ ಮಧ್ಯದಲ್ಲಿಯೇ ಬಿಜೆಪಿ ಶಾಸಕರು, ಸ್ಪೀಕರ್ ಸದನದಿಂದ ಹೊರನಡೆಯುವ ಮೂಲಕ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ಶಾಸಕರ ಈ ವರ್ತನೆಯನ್ನು ಇಡೀ ದೇಶವೇ ಗಮನಿಸಿದೆ ಎಂದು ರಾಹುಲ್ ಹೇಳಿದ್ದಾರೆ.</p>.<p>ಶಾಸಕರ ಖರೀದಿಗೆ ಸೂಚನೆ ನೀಡುವ ಮೂಲಕ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ರಾಹುಲ್ ವಾಗ್ದಾಳಿ<br /> ನಡೆಸಿದ್ದಾರೆ.</p>.<p>ಕಾಂಗ್ರೆಸ್ ಬಣ್ಣನೆ: ಶತಾಯಗತಾಯ ಅಧಿಕಾರ ಹಿಡಿಯಲು ವಿರೋಧ ಪಕ್ಷಗಳ ಶಾಸಕರಿಗೆ ಗಾಳ ಹಾಕಿದ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕಿಂತ ದೊಡ್ಡವರಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕರ್ನಾಟಕ ರವಾನಿಸಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಬಿಜೆಪಿ ಮತ್ತು ಆರ್ಎಸ್ಎಸ್ಗೂ ಇದೊಂದು ಬಹು ದೊಡ್ಡ ಪಾಠಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದ್ದಾರೆ.</p>.<p>ರಾಷ್ಟ್ರಗೀತೆಯ ಮಧ್ಯದಲ್ಲಿಯೇ ಬಿಜೆಪಿ ಶಾಸಕರು, ಸ್ಪೀಕರ್ ಸದನದಿಂದ ಹೊರನಡೆಯುವ ಮೂಲಕ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ಶಾಸಕರ ಈ ವರ್ತನೆಯನ್ನು ಇಡೀ ದೇಶವೇ ಗಮನಿಸಿದೆ ಎಂದು ರಾಹುಲ್ ಹೇಳಿದ್ದಾರೆ.</p>.<p>ಶಾಸಕರ ಖರೀದಿಗೆ ಸೂಚನೆ ನೀಡುವ ಮೂಲಕ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ರಾಹುಲ್ ವಾಗ್ದಾಳಿ<br /> ನಡೆಸಿದ್ದಾರೆ.</p>.<p>ಕಾಂಗ್ರೆಸ್ ಬಣ್ಣನೆ: ಶತಾಯಗತಾಯ ಅಧಿಕಾರ ಹಿಡಿಯಲು ವಿರೋಧ ಪಕ್ಷಗಳ ಶಾಸಕರಿಗೆ ಗಾಳ ಹಾಕಿದ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>