‘ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ಎಫ್ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಪಾಕಿಸ್ತಾನಕ್ಕೆ ಇದರಿಂದ ತೀವ್ರಹಾನಿಯಾಗಿತ್ತು. ಬೇರೆ ದಾರಿ ಕಾಣದೆ ಅವರು ಕದನ ವಿರಾಮಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಬಿಎಸ್ಎಫ್ನ ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.