ಒಂದು ವೇಳೆ ಉಪಮುಖ್ಯಮಂತ್ರಿ ಹುದ್ದೆ ಶಿವಕುಮಾರ್ ಅವರಿಗೆ ಒಲಿದರೆ ಲೋಕಸಭೆ ಚುನಾವಣೆವರೆಗೂ ಪರಮೇಶ್ವರ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆ ಇದೆ. ಆದರೆ, ಎಚ್.ಡಿ. ಕುಮಾರಸ್ವಾಮಿ ಒಕ್ಕಲಿಗರಾಗಿದ್ದು, ಉಪ ಮುಖ್ಯಮಂತ್ರಿ ಹುದ್ದೆಯನ್ನೂ ಒಕ್ಕಲಿಗರಾದ ಶಿವಕುಮಾರ್ಗೆ ನೀಡಿದರೆ ತಪ್ಪು ಸಂದೇಶ ಹೋಗಬಹುದು ಎಂಬ ಆತಂಕವೂ ಪಕ್ಷದಲ್ಲಿದೆ.