ಕಾಂಗ್ರೆಸ್ ಜತೆಗೂಡಿ ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಉತ್ಸುಕರಾಗಿದ್ದಾರೆ. ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ಪ್ರಮುಖರಾದ ಮಾಯಾವತಿ, ಮಮತಾ ಬ್ಯಾನರ್ಜಿ, ಎನ್. ಚಂದ್ರಬಾಬು ನಾಯ್ಡು, ಕೆ. ಚಂದ್ರಶೇಖರ ರಾವ್ ಅವರಿಗೂ ಆಹ್ವಾನ ನೀಡಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.