ಸೇಡಂ ತಾಲ್ಲೂಕು ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯ ಕೋನಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ್ನು ಥಳಿಸಲಾಗಿದೆ. 100ಕ್ಕೂ ಹೆಚ್ಚು ಜನರು ಆತನನ್ನು ಠಾಣೆಗೆ ಕರೆತಂದಿದ್ದಾರೆ. ಅವನನ್ನು ವಿಚಾರಣೆಗೆ ಒಳಪಡಿಸಲಾಗಿ ಸೇಡಂ ತಾಲ್ಲೂಕು ಭೂತಪುರ ಗ್ರಾಮದ ಶಿವಲಿಂಗಪ್ಪ ಗುಡಸಿ ಎಂದು ತಿಳಿದು ಬಂದಿದೆ. ಕೋಡ್ಲಾ ಗ್ರಾಮಸ್ಥರು ಕೂಡ ಇದೇ ರೀತಿ ವ್ಯಕ್ತಿಯೊಬ್ಬನನ್ನು ಥಳಿಸಿದ್ದು, ಆತನನ್ನು ರಕ್ಷಿಸಲು ಹೋದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡೆತಡೆ ಉಂಟುಮಾಡಿದ್ದಾರೆ. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.