‘ಯಾವುದೇ ಅಭ್ಯರ್ಥಿಯು, ಲಿಂಗಾಯತ ಧರ್ಮದ ಹೋರಾಟದಲ್ಲಿ ಪಾಲ್ಗೊಂಡಿದ್ದರಿಂದ ಸೋತಿದ್ದಾರೆ ಅಥವಾ ಗೆದ್ದಿದ್ದಾರೆ ಎನ್ನಲಾಗದು. ಹೋರಾಟವು ಮತವಾಗಿ ಪರಿವರ್ತನೆಯಾಗಬೇಕಿತ್ತು ಎನ್ನುವುದೂ ಸರಿಯಲ್ಲ. ಅಭ್ಯರ್ಥಿ ಕ್ಷೇತ್ರದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎನ್ನುವುದರ ಮೇಲೆ ಅವರ ಸೋಲು–ಗೆಲುವು ನಿರ್ಧಾರವಾಗುತ್ತದೆ. ಧರ್ಮದ ವಿಷಯವನ್ನು ಚುನಾವಣಾ ರಾಜಕಾರಣಕ್ಕೆ ಬಳಸಬಾರದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಹೇಳಿದರು.