ದಕ್ಷಿಣ ಭಾರತದ ಚಿಂತಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಮೇ ಸಾಹಿತ್ಯ ಮೇಳವನ್ನು ಆಯೋಜಿಸಲಾಗಿದೆ. ‘ಬಹುತ್ವ ಭಾರತ: ಇಂದು ಮತ್ತು ನಾಳೆ’ ಎಂಬ ವಿಷಯ ಕುರಿತು ಚರ್ಚೆ, ಗೋಷ್ಠಿ, ಕವಿಗೋಷ್ಠಿ ಕಾರ್ಯಕ್ರಮಗಳು ಜರುಗಲಿದೆ. ಕರ್ನಾಟಕವೂ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಚಿಂತಕರು ಪಾಲ್ಗೊಳ್ಳಲಿದ್ದಾರೆ ಎಂದರು.