ಬೆಂಗಳೂರು: ‘ಬಿ.ಎಸ್.ಯಡಿಯೂರಪ್ಪನವರನ್ನು ಅಲ್ಪಾವಧಿಗೆ ಮುಖ್ಯಮಂತ್ರಿ ಮಾಡುವ ಮೂಲಕ, ಅವರು ಪ್ರತಿನಿಧಿಸುವ ಸಮುದಾಯಕ್ಕೇ ನೀವು ಅವಮಾನ ಮಾಡಿದ್ದೀರಿ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಕುಟುಕಿದ್ದಾರೆ.
‘ಸರ್ಕಾರ ರಚಿಸಲು ಬಹುಮತ ಇಲ್ಲ ಎಂಬುದು ಗೊತ್ತಿದ್ದರೂ, ಆಳದ ಬಾವಿಗೆ ಮಕ್ಕಳನ್ನು ತಳ್ಳಿದಂತೆ ಯಡಿಯೂರಪ್ಪನವರನ್ನು ಮುಂದೆ ಬಿಟ್ಟು, ಕಡೆಗೆ ಅವರು ರಾಜೀನಾಮೆ ಕೊಡುವಂತೆ ಮಾಡಿದಿರಿ’ ಎಂದು ಟೀಕಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಷಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು @AmitShah? ನಮ್ಮ ಪಕ್ಷಗಳ ಚಿಹ್ನೆಯಿಂದ ಆಯ್ಕೆಯಾದವರನ್ನು ಖರೀದಿಸಲು ಮುಂದಾಗಿದ್ದು, ಅವರ ಮೂಲಕ ರಾಜೀನಾಮೆ ಕೊಡಿಸಲು ಪ್ರಯತ್ನಿಸಿದ್ದು ಪವಿತ್ರ ಕಾರ್ಯವೇ?