‘ರಾಜ್ಯದ ಗಡಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡುವುದು, ವೈರಸ್ ಲಕ್ಷಣಗಳು ಕಂಡು ಬಂದರೆ 14 ದಿನಗಳವರೆಗೆ ಅವರಿಗೆ ಇಲಾಖೆಯ ಕಣ್ಗಾವಲಿನಲ್ಲಿಯೇ ಚಿಕಿತ್ಸೆ ಕೊಡಿಸಲು ಆದ್ಯತೆ ನೀಡಲಾಗಿದೆ’ ಎಂದು ಅವರು ಹೇಳಿದರು.