ಒಡಿಶಾದ ಕಡಲತೀರದ ಚಾಂದಿಪುರ ಉಡ್ಡಯನ ಕೇಂದ್ರದಿಂದ ಬೆಳಿಗ್ಗೆ 10.40ಕ್ಕೆ ಕ್ಷಿಪಣಿ ಉಡಾವಣೆ ಮಾಡಲಾಯಿತು.ನಿಗದಿತ ಗುರಿಯನ್ನು ಕ್ಷಿಪಣಿಯು ನಿಖರವಾಗಿ ತಲುಪಿದೆ ಎಂದು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಆರ್ಡಿಒ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.