ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ ಮಾತನಾಡಿ, ಮೇ 25ರಂದು ಬೆಂಗಳೂರಿನ ಲಾಲ್ ಬಾಗ್ನಲ್ಲಿ ಮಾವು ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ ಭಾಗವಹಿಸುವ ಮಾವು ಬೆಳೆಗಾರರು ಉತ್ತಮ ಗುಣಮಟ್ಟದ ಕಾಯಿ ಮಾತ್ರ ಕೊಂಡೊಯ್ಯಬೇಕು. ಆಕರ್ಷಕ ಪ್ಯಾಕಿಂಗ್ ಮೂಲಕ ಗ್ರಾಹಕರನ್ನು ಸೆಳೆಯಬೇಕು ಎಂದು ಅವರು ಹೇಳಿದರು. ತೋಟಗಾರಿಕಾ ಸಹಾಯಕ ನಿರ್ದೇಶಕರಾದ ಎ.ಬೈರಾರೆಡ್ಡಿ, ನವೀನ್, ಪ್ರಸಾದ್, ರೈತ ಮುಖಂಡರಾದ ಚಂದ್ರಾರೆಡ್ಡಿ, ಚಂಗಪ್ಪ, ರಾಮಕೃಷ್ಣಪ್ಪ ಇದ್ದರು.