‘ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಜನಪರವಾದ, ವಿಭಿನ್ನ ಕಾರ್ಯಕ್ರಮ ನೀಡಿದ್ದರು. ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಭ್ರಷ್ಟಾಚಾರ, ಬಡವರ ಮೇಲೆ ದಬ್ಬಾಳಿಕೆ ಹೆಚ್ಚಾದವು. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆದರೆ ರಾಜ್ಯದಲ್ಲಿ ನೆಮ್ಮದಿ ನೆಲಸಲಿದೆ ಎಂಬ ಕಾರಣಕ್ಕೆ 2007ರಲ್ಲಿ ಸಾಲಿಗ್ರಾಮದ ಯೋಗಾನರಸಿಂಹ ಸ್ವಾಮಿಗೆ ಹರಕೆ ಹೊತ್ತೆ’ ಎನ್ನುತ್ತಾರೆ ರಾಮಕೃಷ್ಣೇಗೌಡ.